ನನ್ನ ಭೇಟಿಗೆ ಬರುವ ಜನರು ಆಧಾರ ಕಾರ್ಡ್‌ ತರಬೇಕು ಎಂದ ಸಂಸದೆ ಕಂಗನಾ ರಣಾವತ್‌ ; ಕಾಂಗ್ರೆಸ್‌ ಟೀಕೆ

ಶಿಮ್ಲಾ : ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ ರಣಾವತ್‌, ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಭೇಟಿಗೆ ಬರುವವರು ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು. ಹಾಗೂ ತಮ್ಮ ಭೇಟಿಯ ಉದ್ದೇಶ ಹಾಗೂ ಉದ್ದೇಶಿತ ಕೆಲಸದ ಬಗ್ಗೆಯೂ ಕಾಗದದಲ್ಲಿ ಬರೆಯಬೇಕಾಗುತ್ತದೆ ಎಂದು ಹೇಳಿದರು.

ಹಿಮಾಚಲ ಪ್ರದೇಶಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ಮಂಡಿ ಪ್ರದೇಶದಿಂದ ಆಧಾರ್ ಕಾರ್ಡ್ ಹೊಂದುವುದು ಅವಶ್ಯಕವಾಗಿದೆ, ಕ್ಷೇತ್ರಕ್ಕೆ ಸಂಬಂಧಿಸಿದ ನಿಮ್ಮ ಕೆಲಸಗಳನ್ನು ಸಹ ಪೇಪರ್‌ ಹಾಳೆಯಲ್ಲಿ ಬರೆಯಬೇಕು. ಇದರಿಂದ ಅನಾನುಕೂಲತೆ ಉಂಟಾಗುವುದಿಲ್ಲ ಎಂದು ಅವರು ಹೇಳಿದರು. .
“ಪ್ರವಾಸಿಗರು ತುಂಬಾ ಬರುತ್ತಾರೆ, ಸಾಮಾನ್ಯ ಜನರು ಬಹಳಷ್ಟು ಅನಾನುಕೂಲತೆಗಳನ್ನು ಎದುರಿಸುತ್ತಾರೆ” ಎಂದು ಅವರು ಹೇಳಿದರು.
ಹಿಮಾಚಲದ ಉತ್ತರ ಭಾಗದ ಜನರು ತಮ್ಮನ್ನು ಭೇಟಿಯಾಗಲು ಬಯಸಿದರೆ, ಅವರು ಮನಾಲಿಯಲ್ಲಿರುವ ತಮ್ಮ ಮನೆಗೆ ಭೇಟಿ ನೀಡಬಹುದು ಮತ್ತು ಮಂಡಿಯಲ್ಲಿರುವ ಜನರು ನಗರದ ತಮ್ಮ ಕಚೇರಿಗೆ ಭೇಟಿ ನೀಡಬಹುದು ಎಂದು ಅವರು ಹೇಳಿದರು. ನಿಮ್ಮ ಕೆಲಸದ ಬಗ್ಗೆ ನೀವು ವೈಯಕ್ತಿಕವಾಗಿ ಭೇಟಿಯಾಗುವುದು ಉತ್ತಮ ಎಂದು ಅವರು ಮತದಾರರಿಗೆ ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

 ಕಾಂಗ್ರೆಸ್ ಟೀಕೆ..
ಕಂಗನಾ ರಣಾವತ್‌ ಅವರ ಈ ನಿರ್ಧಾರ ಕಾಂಗ್ರೆಸ್ಸಿನಿಂದ ಟೀಕೆ ಎದುರಿಸಿತು. ಮಂಡಿ ಲೋಕಸಭಾ ಕ್ಷೇತ್ರದಿಂದ ಕಂಗನಾ ರಣಾವತ್ ವಿರುದ್ಧ ಸೋತ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಟೀಕಿಸಿದ್ದಾರೆ. ಜನರು ಅವರನ್ನು ಭೇಟಿ ಮಾಡಲು ಬಯಸಿದರೆ, ಅವರು ಆಧಾರ್ ಕಾರ್ಡ್ ತರುವ ಅಗತ್ಯವಿಲ್ಲ ಎಂದು ಹೇಳಿದರು.
“ನಾವು ಜನಪ್ರತಿನಿಧಿಗಳು. ಹಾಗಾಗಿ ರಾಜ್ಯದ ಪ್ರತಿಯೊಂದು ವರ್ಗದ ಜನರನ್ನು ಭೇಟಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದು ಸಣ್ಣ ಕೆಲಸವಾಗಲಿ, ದೊಡ್ಡ ಕೆಲಸವಾಗಲಿ, ನೀತಿ ವಿಷಯವಾಗಲಿ ಅಥವಾ ವೈಯಕ್ತಿಕ ಕೆಲಸವಾಗಲಿ, ಯಾವುದೇ ಗುರುತಿನ ಅಗತ್ಯವಿಲ್ಲ. ಒಬ್ಬ ವ್ಯಕ್ತಿ ಸಾರ್ವಜನಿಕ ಪ್ರತಿನಿಧಿಯ ಬಳಿಗೆ ಬರುತ್ತಿದ್ದಾರೆ ಎಂದರೆ ಅವರು ಯಾವುದೋ ಕೆಲಸಕ್ಕಾಗಿ ಬರುತ್ತಿದ್ದಾರೆ ಎಂದೇ ಅರ್ಥ ಎಂದು ರಾಜ್ಯ ಲೋಕೋಪಯೋಗಿ ಸಚಿವರೂ ಆಗಿರುವ ವಿಕ್ರಮಾದಿತ್ಯ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. “ಸಭೆಗೆ ತಮ್ಮ ಪತ್ರಗಳನ್ನು ತರಲು ಜನರನ್ನು ಕೇಳುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement