ಲೋಕಾಯುಕ್ತ ದಾಳಿ ವೇಳೆ 45.14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ…!

ಬೆಂಗಳೂರು: ರಾಜ್ಯದ ಸರ್ಕಾರಿ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿಗಳ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ದಾಳಿ ವೇಳೆ ಒಟ್ಟು 45.14 ಕೋಟಿ ರೂಪಾಯಿ ಅಕ್ರಮ ಸಂಪತ್ತು ಪತ್ತೆಯಾಗಿದೆ. 100ಕ್ಕೂ ಹೆಚ್ಚು ಸಿಬ್ಬಂದಿಯ ಲೋಕಾಯುಕ್ತ ಪೊಲೀಸರ ತಂಡ ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳ 56 ಕಡೆ ದಾಳಿ ನಡೆಸಿತ್ತು.
ದಾಳಿಯ ವೇಳೆ 242 ಎಕರೆ ಜಮೀನು, 4.27 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಮೂರು ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಾಹನಗಳು ಸೇರಿದಂತೆ ದಾಳಿ ವೇಳೆ 11 ಅಧಿಕಾರಿಗಳ ಬಳಿ ಸುಮಾರು 45 ಕೋಟಿ ರೂ. ಆದಾಯ ಮೀರಿದ ಆಸ್ತಿ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಬೆಳಗಾವಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಡಿ ಮಹದೇವ ಬನ್ನೂರು, ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ್ ಗೌಡ ಕುರಡಗಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಾರ್ಯಪಾಲಕ ಇಂಜಿನಿಯರ್ ಡಿ.ಎಚ್ ಉಮೇಶ, ದಾವಣಗೆರೆಯ ಬೆಸ್ಕಾಂ ವಿಜಿಲೆನ್ಸ್ ಪೊಲೀಸ್ ಠಾಣೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ.ಎಸ್. ಪ್ರಭಾಕರ, ನಿವೃತ್ತ ಪಿಡಬ್ಲ್ಯುಡಿ ಮುಖ್ಯ ಎಂಜಿನಿಯರ್ ಎಂ.ರವೀಂದ್ರ ಮತ್ತು ಲೋಕಾಯುಕ್ತ ಮುಖ್ಯ ಎಂಜಿನಿಯರ್ ಕೆ.ಜಿ.ಜಗದೀಶ, ಮಂಡ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಶಿವರಾಜು, ರಾಮನಗರದ ಹಾರೋಹಳ್ಳಿ ತಹಶೀಲ್ದಾರ್ ವಿಜಯಣ್ಣ, ನೀರಾವರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಮಹೇಶ ಕೆ, ಪಂಚಾಯತ ಕಾರ್ಯದರ್ಶಿ ಎನ್.ಎಂ.ಜಗದೀಶ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹದೇವಪುರ ವಿಭಾಗದ ಕಂದಾಯ ಅಧಿಕಾರಿ ಬಸವರಾಜ ಮಾಗಿ ಅವರ ಮನೆ ಮೇಲೆ ದಾಳಿ ನಡೆದಿದೆ.
ಒಟ್ಟಾರೆಯಾಗಿ, 11 ಅಧಿಕಾರಿಗಳು 45.14 ಕೋಟಿ ರೂಪಾಯಿ ಮೌಲ್ಯದ ಆದಾಯ ಮೀರಿದ ಆಸ್ತಿ ಹೊಂದಿರುವುದು ಕಂಡುಬಂದಿದೆ ಎಂದು ಲೋಕಾಯುಕ್ತ ಹೇಳಿಕೆ ತಿಳಿಸಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement