ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ಮಾಜಿ ಸಚಿವ ಹಾಗೂ ಶಾಸಕ ನಾಗೇಂದ್ರ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
94 ಕೋಟಿ ರೂಪಾಯಿ ನಿಗಮದ ಹಣವ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿತ್ತು.

94 ಕೋಟಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿದೆ ಎಂಬ ಆರೋಪ ಇದೆ. ಸಚಿವ ಸೂಚನೆಯ ಮೇರೆಗೆ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಇದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಗೆ ರಾಜ್ಯ ಸರ್ಕಾರ ನೀಡಿತ್ತು. ಎಸ್‌ಐಟಿ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲೇ ಇ.ಡಿ ದಾಳಿ ನಡೆಸಿತ್ತು. ಬಳ್ಳಾರಿ ಹಾಗೂ ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ಇ.ಡಿ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಈಗ ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಅವರನ್ನು ಕರೆತರಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

ಏನಿದು ಹಗರಣ?
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಅವರು, ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಾಗೂ ಅನುದಾನದ ದುರುಪಯೋಗದ ಆರೋಪ ಮಾಡಿದ್ದರು. ಅಷ್ಟೇ ಅಲ್ಲ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿದ್ದ ಶಾಸಕ ಬಿ.ನಾಗೇಂದ್ರ ಅವರ ಹೆಸರನ್ನು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದ್ದವು. ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಈ ಪ್ರಕಣದ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement