ವಿಧಾನಸಭೆ ಉಪಚುನಾವಣೆ ಫಲಿತಾಂಶ: ಬಹುತೇಕ ಆಡಳಿತ ಪಕ್ಷಕ್ಕೆ ಮಣೆ ; ಇಂಡಿಯಾ ಮೈತ್ರಿಕೂಟ 10, ಬಿಜೆಪಿ 2 ಸ್ಥಾನಗಳಲ್ಲಿ ಜಯ

ನವದೆಹಲಿ: ಜುಲೈ 10 ರಂದು ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಮತದಾರರು ಆಡಳಿತಾರೂಢ ಪಕ್ಷಗಳಿಗೆ ಮಣೆ ಹಾಕಿದ್ದಾರೆ. ಏಳು ರಾಜ್ಯಗಳ 13 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಪಕ್ಷ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಾಲ್ಕು, ಹಿಮಾಚಲ ಪ್ರದೇಶದಲ್ಲಿ ಮೂರು, ಉತ್ತರಾಖಂಡದಲ್ಲಿ ಎರಡು ಮತ್ತು ಪಂಜಾಬ್, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡಿನಲ್ಲಿ ತಲಾ ಒಂದು ಸ್ಥಾನಗಳಿಗೆ ಬುಧವಾರ ಉಪಚುನಾವಣೆ ನಡೆದಿತ್ತು.
ಉತ್ತರಾಖಂಡ ವಿಧಾನಸಭಾ ಉಪಚುನಾವಣೆಗಳಾದ ಮಂಗಲೌರ್ ಮತ್ತು ಬದರಿನಾಥ್ ಎರಡರಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲಿ ಉಪಚುನಾವಣೆ ನಡೆದ ಮೂರು ಸ್ಥಾನಗಳ ಪೈಕಿ ಎರಡನ್ನು ಕಾಂಗ್ರೆಸ್‌ ಪಕ್ಷ ಪಡೆದುಕೊಂಡಿದೆ. ಒಂದರಲ್ಲಿ ಬಿಜೆಪಿ ಜಯಗಳಿಸಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಕಮಲೇಶ ಠಾಕೂರ್ ಅವರು ಬಿಜೆಪಿಯ ಹೋಶಿಯಾರ್ ಸಿಂಗ್ ಅವರನ್ನು 9,399 ಮತಗಳ ಅಂತರದಿಂದ ಸೋಲಿಸಿ ಡೆಹ್ರಾ ವಿಧಾನಸಭಾ ಸ್ಥಾನದಲ್ಲಿ ಗೆದ್ದಿದ್ದಾರೆ. ನಲಗಢದಲ್ಲಿ ಕಾಂಗ್ರೆಸ್‌ನ ಹರ್ದೀಪ್ ಸಿಂಗ್ ಬಾವಾ ಅವರು ಬಿಜೆಪಿಯ ಕೆ.ಎಲ್. ಠಾಕೂರ್ ವಿರುದ್ಧ 25,618 ಮತಗಳಿಂದ ಜಯಗಳಿಸಿದ್ದಾರೆ.
ಉತ್ತರಾಖಂಡದ ಬದರಿನಾಥ್ ಕ್ಷೇತ್ರದಲ್ಲಿ ಲಖಪತ್ ಸಿಂಗ್ ಬುಟೋಲಾ ಅವರು ಮಾಜಿ ಸಚಿವ ಬಿಜೆಪಿಯ ರಾಜೇಂದ್ರ ಸಿಂಗ್ ಭಂಡಾರಿ ಅವರನ್ನು 5,224 ಮತಗಳಿಂದ ಸೋಲಿಸಿದ್ದಾರೆ. ಮಂಗಲೌರ್‌ ಕ್ಷೇತ್ರದಲ್ಲಿ ಖಾಜಿ ಮೊಹಮ್ಮದ್ ನಿಜಾಮುದ್ದೀನ್ ಅವರು ಬಿಜೆಪಿಯ ಕರ್ತಾರ್ ಸಿಂಗ್ ಭದಾನ ವಿರುದ್ಧ ಕೇವಲ 422 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಪಂಜಾಬ್‌ ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಮೊಹಿಂದರ್ ಭಗತ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಶೀತಲ್ ಅಂಗುರಲ್ ವಿರುದ್ಧ 37,325 ಮತಗಳ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗ (ಇಸಿ) ತಿಳಿಸಿದೆ. ಅಂಗುರಲ್ ಎಎಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದ ನಂತರ ಈ ಸ್ಥಾನ ತೆರವಾಗಿತ್ತು.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

ತಮಿಳುನಾಡಿನಲ್ಲಿ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಣ್ಣಿಯೂರ್ ಶಿವ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ –ಎನ್‌ಡಿಎ ಮೈತ್ರಿಕೂಟದ ಅ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷದ ಅಭ್ಯರ್ಥಿ ಅಂಬುಮಣಿ ಸಿ ಅವರನ್ನು 67,757 ಮತಗಳ ಅಂತರದಿಂದ ಸೋಲಿಸಿದರು.
ಪಶ್ಚಿಮ ಬಂಗಾಳದ ನಾಲ್ಕು ಸ್ಥಾನಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಗಳು ಜಯಗಳಿಸಿದ್ದಾರೆ. ರಾಯಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಕೃಷ್ಣ ಕಲ್ಯಾಣಿ ಅವರು ಬಿಜೆಪಿಯ ಮಾನಸಕುಮಾರ ಘೋಷ್ ಅವರನ್ನು 50,077 ಮತಗಳ ಅಂತರದಿಂದ ಸೋಲಿಸಿದ್ದಾರೆ. ರಣಘಾಟ್ ದಕ್ಷಿಣ ಕ್ಷೇತ್ರದಲ್ಲಿ ಪಕ್ಷದ ಮುಕುತ್ ನಮಿ ಅಧಿಕಾರಿ ಬಿಜೆಪಿಯ ಮನೋಜ್ ಕುಮಾರ್ ಬಿಸ್ವಾಸ್ ಅವರನ್ನು 74,485 ಮತಗಳಿಂದ ಸೋಲಿಸಿದರು. ಬಾಗ್ಡಾ ಕ್ಷೇತ್ರದಲ್ಲಿ ಟಿಎಂಸಿಯ ಮಧುಪರ್ಣ ಠಾಕೂರ್ ಅವರು ಬಿಜೆಪಿಯ ಬಿನಯಕುಮಾರ ಬಿಸ್ವಾಸ್ ಅವರನ್ನು 74,251 ಮತಗಳಿಂದ ಸೋಲಿಸಿದರು ಮತ್ತು ಸುಪ್ತಿ ಪಾಂಡೆ ಅವರು ಬಿಜೆಪಿಯ ಕಲ್ಯಾಣ್ ಚೌಬೆ ಅವರನ್ನು 62,312 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಶ್ ಶರ್ಮಾ 27,041 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್‌ನ ಪುಷ್ಪಿಂದರ್ ವರ್ಮಾ 25,470 ಮತಗಳನ್ನು ಗಳಿಸಿದ್ದಾರೆ ಎಂದು ವೆಬ್‌ಸೈಟ್ ತೋರಿಸಿದೆ.
ಮಧ್ಯಪ್ರದೇಶದ ಅಮರವಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲೇಶ ಪ್ರತಾಪ ಷಾ ಅವರು ಕಾಂಗ್ರೆಸ್‌ನ ಧೀರನ್ ಷಾ ಇನ್ವಾಟಿ ವಿರುದ್ಧ 3,027 ಮತಗಳ ಅಂತರದಿಂದ ಜಯಗಳಿಸಿದರೆ, ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶಂಕರ ಸಿಂಗ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿಯಾದ ಜೆಡಿಯು’ ಕಲಾಧರ ಪ್ರಸಾದ ಮಂಡಲ್ ಅವರನ್ನು 8,246 ಮತಗಳ ಅಂತರದಿಂದ ಸೋಲಿಸಿದರು ಎಂದು ಚುನಾವಣಾ ಆಯೋಗದ ವೆಬ್‌ಸೈಟ್ ತೋರಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement