ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಿಜೆಪಿಯ ನೂತನ ಸಂಸದ ವರ್ಷದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಾಂಗ್ರೆಸ್ ಶಾಸಕ ಭೀಮಣ್ಣ ಟಿ ನಾಯ್ಕ ಶುಕ್ರವಾರ ರಾತ್ರಿ ಶಿರಿಸಯಲ್ಲಿ ಅಭಿನಂದಿಸಿದ್ದಾರೆ..!
ಸಂಸದರ ಕಚೇರಿಗೆ ತೆರಳಿದ ಶಾಸಕ ಭೀಮಣ್ಣ ನಾಯ್ಕ ಅವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಹಾರ ಹಾಕಿ, ಫಲ ನೀಡಿ ಅಭಿನಂದಿಸಿದರು. ಈ ವೇಳೆ ಊಭಯಕುಶಲೋಪರಿ ಮಾತುಕತೆ ನಡೆಯಿತು. ನಂತರ ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಸಂಸದರು ಹಾಗೂ ಶಾಸಕರು ಚರ್ಚೆ ನಡೆಸಿದರು ಎನ್ನಲಾಗಿದೆ. ಶಿರಸಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಜಗದೀಶ ಗೌಡ್ರು, ಎಸ್.ಕೆ.ಭಾಗವತ, ಅಬ್ಬಾಸ ತೋನ್ಸೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ