ನವದೆಹಲಿ: ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಾರತದ ತಂಡದ ಮಾಜಿ ಮುಖ್ಯ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದೆ.
ಲಂಡನ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ್ವಾಡ್ ಅವರಿಗೆ ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಮಂಡಳಿಯ ಕಾರ್ಯದರ್ಶಿ ಜಯ ಶಾ ಸೂಚಿಸಿದ್ದಾರೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
“ ಕ್ಯಾನ್ಸರ್ನಿಂದ ಬಳಲುತ್ತಿರುವ ಭಾರತದ ಹಿರಿಯ ಕ್ರಿಕೆಟಿಗ ಅಂಶುಮಾನ ಗಾಯಕ್ವಾಡ ಅವರಿಗೆ ಆರ್ಥಿಕ ನೆರವು ನೀಡಲು ತಕ್ಷಣವೇ ಜಾರಿಗೆ ಬರುವಂತೆ 1 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಜಯ ಶಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಕೇಳಿಕೊಂಡಿದ್ದಾರೆ ಎಂದು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಹೇಳಿಕೆಯಲ್ಲಿ ತಿಳಿಸಿದೆ.
ವರದಿಗಳ ಪ್ರಕಾರ, ಅಂಶುಮಾನ ಗಾಯಕ್ವಾಡ ಅವರು ಪ್ರಸ್ತುತ ಲಂಡನ್ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. “ಬಿಸಿಸಿಐ ಗಾಯಕ್ವಾಡ್ ಅವರ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತದೆ ಮತ್ತು ಅವರು ಈ ಹಂತದಿಂದ ಬಲವಾಗಿ ಹೊರಬರುತ್ತಾರೆ ಎಂಬ ವಿಶ್ವಾಸವಿದೆ” ಎಂದು ಬಿಸಿಸಿಐ ಹೇಳಿಕೆ ತಿಳಿಸಿದೆ.
71 ವರ್ಷ ವಯಸ್ಸಿನ ಅಂಶುಮಾನ ಗಾಯಕ್ವಾಡ 1975 ಮತ್ತು 1987 ರ ನಡುವೆ ಭಾರತಕ್ಕಾಗಿ 40 ಟೆಸ್ಟ್ ಮತ್ತು 15 ಏಕಿದಿನದ ಪಂದ್ಯಗಳನ್ನು ಆಡಿದ್ದಾರೆ.
ಸ್ಪೋರ್ಟ್ಸ್ಟಾರ್ಗೆ ನೀಡಿದ ಸಂದರ್ಶನದಲ್ಲಿ, ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರು ಭಾರತ ತಂಡದ ತಮ್ಮ ಮಾಜಿ ಸಹ ಆಟಗಾರ ಗಾಯಕ್ವಾಡ ಬಳಲುತ್ತಿರುವುದನ್ನು ನೋಡಿ ನನಗೆ ನೋವಾಗಿದೆ ಮತ್ತು ಬಿಸಿಸಿಐ ಅವರ ನೆರವಿಗೆ ಬರಬೇಕು ಎಂದು ಹೇಳಿದ್ದರು.
“ಇದು ದುಃಖ ಮತ್ತು ತುಂಬಾ ಖಿನ್ನತೆ ವಿಚಾರವಾಗಿದೆ. ನಾನು ನೋವಿನಲ್ಲಿದ್ದೇನೆ ಏಕೆಂದರೆ ನಾನು ಅಂಶುಮಾನ ಗಾಯಕ್ವಾಡ ಜೊತೆಯಲ್ಲಿ ಆಡಿದ್ದೇನೆ ಮತ್ತು ಅವರನ್ನು ಈ ಸ್ಥಿತಿಯಲ್ಲಿ ನೋಡಲು ಸಹಿಸಲು ಸಾಧ್ಯವಿಲ್ಲ. ಯಾರಿಗೂ ತೊಂದರೆ ಆಗಬಾರದು. ಮಂಡಳಿಯು ಅವರನ್ನು ನೋಡಿಕೊಳ್ಳುತ್ತದೆ ಎಂದು ನನಗೆ ತಿಳಿದಿದೆ ಎಂದು ಕಪಿಲ್ ಹೇಳಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ