ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ.
ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ರಾಜ್ಯಾದ್ಯಂತ ಬಾರೀ ಚರ್ಚೆಗೆ ಗ್ರಾಸವಾಗಿದೆ. ಇಂದಿನಿಂದ (ಜುಲೈ ೧೫) ಆರಂಭವಾಗುತ್ತಿರುವ ವಿಧಾನ ಮಂಡಳ ಅಧಿವೇಶನದಲ್ಲಿ ಈ ಪ್ರಕರಣವನ್ನು ಪ್ರಮುಖವಾಗಿ ಚರ್ಚೆ ಕೈಗೆತ್ತಿಕೊಂಡು ಸರ್ಕಾರದ ವಿರುದ್ಧ ಮುಗಿಬೀಳು ವಿಪಕ್ಷಗಳು ಸಜ್ಜಾಗಿವೆ.ಹೀಗಾಗಿ ರಾಜ್ಯ ಸರ್ಕಾರ ಮುಡಾ ಅಕ್ರಮದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಆದೇಶ ಹೊರಡಿಸಿದ್ದು, 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.
ಹೀಗಾಗಿ ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ತನಿಖೆಗೆ ಸಹಕರಿಸಲು ಸೂಚಿಸಿ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ‌

ಪ್ರಮುಖ ಸುದ್ದಿ :-   ವಿಡಿಯೋ | ಬಸ್‌ನಲ್ಲೇ ಮಹಿಳೆಗೆ ಹೃದಯಾಘಾತ ; ನೇರ ಆಸ್ಪತ್ರೆಗೆ ಬಸ್‌ ಚಲಾಯಿಸಿಕೊಂಡು ಬಂದು ಸಮಯಪ್ರಜ್ಞೆ ಮೆರೆದ ಚಾಲಕ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement