ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಹತ್ತು ತಾಲೂಕುಗಳ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಹಳಿಯಾಳ ಹಾಗೂ ಮುಂಡಗೋಡ ತಾಲೂಕು ಹೊರತುಪಡಿಸಿ ಭಟ್ಕಳ, ಹೊನ್ನಾವರ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾಹಿತಿ ನೀಡಿದ್ದಾರೆ
ನಿಮ್ಮ ಕಾಮೆಂಟ್ ಬರೆಯಿರಿ