ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನ (ಆಗಸ್ಟ್‌ 1ರ ವರೆಗೆ) ವಿಸ್ತರಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಆದೇಶಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ 13 ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ 4 ಆರೋಪಿಗಳನ್ನು 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ ಸಿ. ಗೌಡರ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸಲಾಯಿತು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಗಳನ್ನು ಬಿಡುಗಡೆ ಮಾಡುವುದರಿಂದ ಪ್ರಸ್ತುತ ನಡೆಯುತ್ತಿರುವ ತನಿಖೆಗಳಿಗೆ ಅಡ್ಡಿಯಾಗಬಹುದು ಎಂದು ವಾದಿಸಿದರು. ಜಾಮೀನು ನೀಡುವುದರಿಂದ ನಿರ್ಣಾಯಕ ಸಾಕ್ಷ್ಯ ನಾಶಕ್ಕೆ ಕಾರಣವಾಗಬಹುದು ಎಂದು ಪ್ರಾಸಿಕ್ಯೂಷನ್ ಒತ್ತಿ ಹೇಳಿತು. ಮಾಹಿತಿ ಪಡೆದುಕೊಂಡ ಮ್ಯಾಜಿಸ್ಟ್ರೇಟ್‌ ಅವರು ಎಲ್ಲಾ ಆರೋಪಿಗಳನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.
ಶುಕ್ರವಾರ ವಿಚಾರಣೆ….
ಏತನ್ಮಧ್ಯೆ, ಜೈಲಿನಲ್ಲಿ ಮನೆಯಿಂದ ಆಹಾರ, ಹಾಸಿಗೆ ಮತ್ತು ಪುಸ್ತಕಗಳನ್ನು ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಶುಕ್ರವಾರ ನಡೆಯಲಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement