ಭೂ ವಿವಾದ : ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರು ಸೋದರ ಸಂಬಂಧಿಗಳು ಸಾವು

ಬೆಳಗಾವಿ : ಭೂ ವಿವಾದದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಗಳು ಪರಸ್ಪರ ಹೊಡೆದಾಡಿಕೊಂಡು ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಖೋತವಾಡಿ ಗ್ರಾಮದ ಹನುಮಂತ ರಾಮಚಂದ್ರ ಖೋತ (34) ಮತ್ತು ಖಂಡೋಬಾ ತಾನಾಜಿ ಖೋತ(32) ಮೃತಪಟ್ಟವರು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹೋದರ ಸಂಬಂಧಿಕರ ಮಕ್ಕಳ ನಡುವೆ ಸೋಮವಾರ ರಾತ್ರಿ ಜಗಳ ನಡೆದಿದ್ದು, ಅದು ವಿಕೋಪಕ್ಕೆ ಈ ವೇಳೆ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ.

ಈ ಹೊಡೆದಾಟದಲ್ಲಿ ಹಣಮಂತ ರಾಮಚಂದ್ರ ಖೋತ ಹಾಗೂ ಖಂಡೋಭಾ ತಾನಾಜಿ ಖೋತ ಇಬ್ಬರು ಗಂಭೀರ ಗಾಯಗೊಂಡಿದ್ದರು. ಇಬ್ಬರನ್ನು ಮಹಾರಾಷ್ಟ್ರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.
ಜಮೀನಿಗೆ ಸಂಬಂಧಿಸಿ ಕೆಲವು ದಿನಗಳಿಂದ ವಿವಾದ ಇತ್ತು ಎನ್ನಲಾಗಿದೆ. ಗ್ರಾಮದ ಹಿರಿಯರು ನಂತರ ರಾಜೀ ಸಂಧಾನ ಮಾಡಿದ್ದರು. ಆದರೂ ತಕರಾರು ಕಾಣಿಸಿಕೊಂಡ ಕಾರಣ ಇಬ್ಬರೂ ಜಗಳ ಮಾಡಿಕೊಂಡು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಶಂಕರ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement