ನವದೆಹಲಿ: ದೆಹಲಿಯಲ್ಲಿ ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ಗುರುವಾರ ಮಾಜಿ ಪ್ರಧಾನಿ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ವ್ಹೀಲ್ ಚೇರ್ನಲ್ಲಿ ತೆರಳಿದ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆ ತೆರಳಿದ ದೇವೇಗೌಡರು ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ ವಿಚಾರಗಳನ್ನ ಚರ್ಚಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಮೋದಿ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ದೇವೇಗೌಡ ಅವರನ್ನು ಭೇಟಿಯಾಗಿರುವ ಫೋಟೊಗಳನ್ನು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಜೀ ಅವರನ್ನು ಭೇಟಿಯಾಗಿರುವುದು ಗೌರವದ ಸಂಗತಿ. ವಿವಿಧ ವಿಚಾರಗಳ ಬಗ್ಗೆ ಅವರಿಗಿರುವ ಬುದ್ಧಿವಂತಿಕೆ ಹಾಗೂ ಅವರ ಆಳವಾದ ದೃಷ್ಟಿಕೋನ ಅತ್ಯಂತ ಮೌಲ್ಯಯುತವಾಗಿದೆ ಎಂದು ಬರೆದುಕೊಂಡಿದ್ದಾರೆ.
ಲೋಕಸಭಾ ಚುನಾವಣೆಯ ಬಳಿಕ ಮೋದಿ ಅವರು ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದರ ಅಧ್ಯಾತ್ಮದ ಪ್ರಿಯ ತಾಣ ʻವಿವೇಕಾನಂದ ರಾಕ್ ಸ್ಮಾರಕʼಕ್ಕೆ ಭೇಟಿ ನೀಡಿದ್ದರು. ಇದರ ನೆನಪಿನಾರ್ಥವಾಗಿ ವಿವೇಕಾನಂದ ಮೂರ್ತಿಯ ಮುಂದೆ ಧ್ಯಾನಸ್ಥರಾಗಿರುವ ಮೋದಿ ಅವರ ಕಲಾಕೃತಿಯನ್ನು ದೇವೇಗೌಡರು ಉಡುಗೊರೆಯಾಗಿ ನೀಡಿದ್ದಾರೆ.
ಗುರುವಾರ ರಾಜ್ಯಸಭಾ ಅಧಿವೇಶನದಲ್ಲಿಂದು ಪಾಲ್ಗೊಂಡಿದ್ದ ಹೆಚ್.ಡಿ ದೇವೇಗೌಡ ಅವರಿಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣದ ಬಗ್ಗೆಪ್ರಸ್ತಾಪಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ