ಮೈ ಜುಂ ಎನ್ನುವ ವೀಡಿಯೊ..| ಮಧ್ಯಪ್ರದೇಶದಲ್ಲಿ ವ್ಯಕ್ತಿಯನ್ನು ಜೀವಂತವಾಗಿ ನುಂಗಲು ಯತ್ನಿಸಿದ 15 ಅಡಿ ಹೆಬ್ಬಾವು…

ಮಧ್ಯಪ್ರದೇಶದ ಜಬಲ್‌ಪುರದ ಕಲ್ಯಾಣಪುರ ಪ್ರದೇಶದಲ್ಲಿ 15 ಅಡಿ ಉದ್ದದ ಹೆಬ್ಬಾವಿನ ದಾಳಿಯಿಂದ ವ್ಯಕ್ತಿಯೊಬ್ಬರು ಸ್ವಲ್ಪದರಲ್ಲೇ ಬದುಕುಳಿದಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾದ ಭಯಾನಕ ಘಟನೆಯಲ್ಲಿ ತೆರೆದ ಮೈದಾನದಲ್ಲಿ ಮಲವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದ ಹೆಬ್ಬಾವು ವ್ಯಕ್ತಿಯ ಕುತ್ತಿಗೆಗೆ ಬಲವಾಗಿ ಸುತ್ತು ಹಾಕಿ ಹಿಡಿದುಕೊಂಡಿದೆ. ಸಕಾಲದಲ್ಲಿ ನೆರವಿಗೆ ಬಂದ ಗ್ರಾಮಸ್ಥರಿಂದ ವ್ಯಕ್ತಿಯ ಜೀವ ಉಳಿದಿದೆ.
ಇಂಡಿಯಾ ಟುಡೇ ಪ್ರಕಾರ, ಜಬಲ್‌ಪುರದ ರಾಮ ಸಹಾಯ್ ಅವರು ತೆರೆದ ಮೈದಾನದಲ್ಲಿ ಮಲವಿಸರ್ಜನೆ ಮಾಡುತ್ತಿದ್ದಾಗ 15 ಅಡಿ ಹೆಬ್ಬಾವು ಅವರ ಮೇಲೆ ದಾಳಿ ಮಾಡಿದೆ. ಹಾವು ನಿಧಾನವಾಗಿ ಹಿಂದಿನಿಂದ ಬಂದು ತನ್ನ ಬಾಲದಿಂದ ಮನುಷ್ಯನ ಕುತ್ತಿಗೆಗೆ ಬಿಗಿಯಾಗಿ ಸುತ್ತಿಕೊಂಡಿತು. ಆತ ಸಹಾಯಕ್ಕಾಗಿ ಕೂಗಿಕೊಂಡಿದ್ದಾನೆ.ಆತನ ಕಿರುಚಾಟ ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಅವರು ಬರುವಷ್ಟರಲ್ಲಿ ಹೆಬ್ಬಾವು ಆತನನ್ನು ಬಿಗಿಯಾಗಿ ಸುತ್ತಿಕೊಂಡಿತ್ತು, ಹಾಗೂ ಆತನನ್ನು ಉಳಿಸಲು ಗ್ರಾಮಸ್ಥರು ಹೋರಾಟವನ್ನೇ ನಡೆಸಬೇಕಾಯಿತು.

ದೈತ್ಯಾಕಾರದ ಹಾವು ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯ ಕುತ್ತಿಗೆ ಮತ್ತು ತೋಳಿನ ಸುತ್ತ ಸುತ್ತಿಕೊಂಡಿರುವ ದೃಶ್ಯಾವಳಿಯನ್ನು ವೀಡಿಯೊ ತೋರಿಸುತ್ತದೆ. ಆತ ಕೂಗಿಕೊಂಡಿದ್ದಾನೆ. ಸಹಾಯಕ್ಕೆ ಧಾವಿಸಿದ ಗ್ರಾಮಸ್ಥರು ಸಮಯ ವ್ಯರ್ಥ ಮಾಡದೆ ಹೆಬ್ಬಾವನ್ನು ವ್ಯಕ್ತಿಯಿಂದ ಬೇರ್ಪಡಿಸಲು ಪ್ರಯತ್ನಿಸಿದರು. ಸಹಾಯ್ ಸ್ವತಃ ಗ್ರಾಮಸ್ಥರಿಗೆ ಹಾವನ್ನು ಕೊಲ್ಲುವಂತೆ ಕೂಗಿಕೊಳ್ಳುತ್ತಿದ್ದ.ಆದರೆ ಕೊನೆಗೆ ಅದು ಇನ್ನಷ್ಟು ತೊಂದರೆಗೆ ಕಾರಣವಾಗಬಹುದು ಎಂಬ ಕಾರಣಕ್ಕೆ ಗ್ರಾಮಸ್ಥರು ಹೆಬ್ಬಾವನ್ನು ಕೊಲ್ಲಲು ನಿರ್ಧರಿಸಿದರು. ಕೊಡಲಿ, ಕಲ್ಲು ಮತ್ತಿತರ ಚೂಪಾದ ವಸ್ತುಗಳಿಂದ ಹಾವನ್ನು ಕೊಂದು ಆತನನ್ನು ಬಿಡಿಸಿದ್ದಾರೆ.

ಪ್ರಮುಖ ಸುದ್ದಿ :-   ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ವರದಿಗಳ ಪ್ರಕಾರ, ಹೆಬ್ಬಾವನ್ನು ಕೊಂದ ಜನರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ, ಅರಣ್ಯ ಇಲಾಖೆ ಅಧಿಕಾರಿಗಳು ಅದರ ಜೀವ ಉಳಿಸಲು ಪ್ರಾಣಿಯನ್ನು ಕೊಲ್ಲುವುದು ಅಪರಾಧವಲ್ಲ ಎಂದು ಗಮನಿಸಿದ್ದಾರೆ.
“ಹೆಬ್ಬಾವು ವ್ಯಕ್ತಿಯ ಕುತ್ತಿಗೆಗೆ ಬಲವಾಗಿ ಸುತ್ತಿಕೊಂಡಿದ್ದರಿಂದ ವ್ಯಕ್ತಿ ಉಸಿರಾಡಲು ಕಷ್ಟಪಡುತ್ತಿದ್ದ. ಅಂತಹ ಸಂದರ್ಭಗಳಲ್ಲಿ ಕಾಡು ಪ್ರಾಣಿಯನ್ನು ಕೊಂದರೆ ವನ್ಯಜೀವಿ ಕಾಯಿದೆಯ ಸೆಕ್ಷನ್ 11 ರ ಅಡಿಯಲ್ಲಿ ಅವರಿಗೆ ವಿನಾಯಿತಿ ನೀಡಲಾಗುತ್ತದೆ. ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಜುಲೈ 21 ರಂದು ಸಂಭವಿಸಿದ ಈ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್‌ ಆಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement