ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಭೂಕುಸಿತದ ಎಚ್ಚರಿಕೆ

ಬೆಂಗಳೂರು : ಬುಧವಾರ (ಜುಲೈ 31) ಕರ್ನಾಟಕದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ.
ಆಗಸ್ಟ್ 3 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಜುಲೈ 30-31 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದೆ.

ಮೈಸೂರು, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅಲ್ಲದೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ರಾಜ್ಯದ 31 ಉಪ ವಿಭಾಗಗಳಲ್ಲಿ ಸಂಭಾವ್ಯ ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದೆ.ಆಗಸ್ಟ್ 3 ರವರೆಗೆ ರಾಜ್ಯದಲ್ಲಿ ಗಾಳಿ ಗಂಟೆಗೆ 30-40 ಕಿ.ಮೀ. ವರೆಗೆ ವೇಗದಲ್ಲಿ ಬೀಸಲಿದೆ. ಆಗಸ್ಟ್ 3 ರವರೆಗೆ ಬೆಂಗಳೂರಿನಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ.
ಮಂಗಳವಾರ ಬೆಳಿಗ್ಗೆ 8:30 ರವರೆಗೆ ಕಳೆದ 24 ಗಂಟೆಗಳಲ್ಲಿ , ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹಂಚಿಕೊಂಡ ಮಾಹಿತಿ ತಿಳಿಸಿದೆ. ಚಿಕ್ಕಮಗಳೂರಿನ ಕಮ್ಮರಡಿಯಲ್ಲಿ ಅತಿ ಹೆಚ್ಚು ಅಂದರೆ 19 ಸೆಂ.ಮೀ ಮಳೆಯಾಗಿದ್ದು, ಕೊಡಗಿನ ನಾಪೋಕ್ಲುವಿನಲ್ಲಿ 18 ಸೆಂ.ಮೀ, ಚಿಕ್ಕಮಗಳೂರಿನ ಕೊಪ್ಪದಲ್ಲಿ 15 ಸೆಂ.ಮೀ ಮಳೆಯಾಗಿದೆ.

ಪ್ರಮುಖ ಸುದ್ದಿ :-   ವಾಡಿಕೆಗಿಂತ ಒಂದು ವಾರಕ್ಕಿಂತ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement