‘ಬ್ರಿಟಿಷ್ ಪ್ರಜೆ’ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಕ್ಷಣೆ : ಪ್ರಧಾನಿ ಮೋದಿ, ಅಮಿತ್ ಶಾಗೆ ʼಕಾನೂನು ಕ್ರಮʼದ ಎಚ್ಚರಿಕೆ ನೀಡಿದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅವರಿಬ್ಬರು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ 2003 ರಲ್ಲಿ ಬ್ರಿಟಿಷ್ ಪೌರತ್ವ ಪಡೆದಿದ್ದಾರೆ ಮತ್ತು ಲಂಡನ್‌ನಲ್ಲಿ ಬ್ಯಾಕ್‌ ಆಪ್ಸ್ ಎಂಬ ಕಂಪನಿ ಸ್ಥಾಪಿಸಿದ್ದಾರೆ. ಹೀಗಾಗಿ ಇದು ಗಾಂಧಿಯವರ ಭಾರತೀಯ ಪೌರತ್ವವನ್ನು ಅಮಾನ್ಯಗೊಳಿಸುತ್ತದೆ ಎಂದು ಸುಬ್ರಮಣಿಯನ್ ಸ್ವಾಮಿ ಅನೇಕ ವರ್ಷಗಳಿಂದ ಆರೋಪಿಸುತ್ತಿದ್ದಾರೆ.
ಇದಕ್ಕೆ ಅವರು, ರಾಹುಲ್‌ ಗಾಂಧಿ ಅವರು ಸಲ್ಲಿಸಿದ ವಾರ್ಷಿಕ ತೆರಿಗೆ ರಿಟರ್ನ್‌ಗೆ ಸಾಕ್ಷಿ ಎಂದು ಹೇಳಿಕೊಂಡ X ನಲ್ಲಿ ದಾಖಲೆಯ ತುಣುಕನ್ನು ಹಂಚಿಕೊಂಡಿದ್ದಾರೆ. ‘ಇದು ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯಾಗಿ ಬ್ರಿಟಿಷ್ ಸರ್ಕಾರಕ್ಕೆ ಸಲ್ಲಿಸಿದ ವಾರ್ಷಿಕ ರಿಟರ್ನ್ ಆಗಿದೆ. ಕ್ರಮ ಕೈಗೊಳ್ಳದಂತೆ ಸೋನಿಯಾ ಅವರಿಂದ ಮೋದಿಗೆ ಬ್ಲಾಕ್ ಮೇಲ್ ಮಾಡಲಾಗಿದೆಯೇ?’ಎಂದು ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿ ಬ್ರಿಟಿಷ್ ಪ್ರಜೆ ಎಂದು ಬಹಳ ಹಿಂದಿನಿಂದಲೂ ಸ್ವಾಮಿ ಹೇಳಿಕೊಳ್ಳುತ್ತ ಬಂದಿದ್ದಾರೆ. ಅವರ ಪ್ರಕಾರ, ಗಾಂಧಿ ಅವರಿಗೆ 2003 ರಲ್ಲಿ ವಿದೇಶದಲ್ಲಿ ಪೌರತ್ವವನ್ನು ನೀಡಲಾಯಿತು ಮತ್ತು ಲಂಡನ್‌ನಲ್ಲಿ ಬ್ಯಾಕ್ ಓಪ್ಸ್ ಎಂಬ ಕಂಪನಿಯನ್ನು ಪ್ರಾರಂಭಿಸಿದ್ದಾರೆ.
ಈಗ ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಈ ಆರೋಪ ಎತ್ತಿದ್ದು, “ರಾಹುಲ್ ಗಾಂಧಿ ವಿದೇಶಿ ಪ್ರಜೆಯಾಗಿದ್ದು, 2003 ರಲ್ಲಿ ಬ್ರಿಟಿಷ್ ಪೌರತ್ವವನ್ನು ಪಡೆದುಕೊಂಡು ಲಂಡನ್‌ನಲ್ಲಿ ಬ್ಯಾಕ್ ಓಪ್ಸ್ ಎಂಬ ಕಂಪನಿಯನ್ನು ಪ್ರಾರಂಭಿಸಿದಾಗ ಮೋದಿ ಮತ್ತು ಶಾ ಅವರನ್ನು ಏಕೆ ರಕ್ಷಿಸುತ್ತಿದ್ದಾರೆ? ಅವರ ಭಾರತೀಯ ಪ್ರಜೆ ಅಮಾನ್ಯವಾಗಿದೆ. ಮೋದಿ ರಕ್ಷಣೆಯನ್ನು ಮುಂದುವರಿಸಿದರೆ, ನಾನು ಅವರ ವಿರುದ್ಧ ಮೋದಿ ಮತ್ತು ಶಾ ವಿರುದ್ಧ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಬರೆದಿದ್ದಾರೆ.

ಅವರು ಈ ಸಮಸ್ಯೆಗೆ ಸಂಬಂಧಿಸಿದಂತೆ 2019 ರಲ್ಲಿ ಗೃಹ ಸಚಿವಾಲಯಕ್ಕೆ ಸಲ್ಲಿಸಿದ್ದ ದೂರಿನ ಪ್ರತಿಯನ್ನು ಸಹ ಹಂಚಿಕೊಂಡಿದ್ದಾರೆ. ಮುಂದೆ, ಅವರು ಸಚಿವಾಲಯದ ಮತ್ತೊಂದು ದಾಖಲೆಯನ್ನು ಹಂಚಿಕೊಂಡಿದ್ದು, ಅದು ಗಾಂಧಿಯವರಿಗೆ ಪ್ರತಿಕ್ರಿಯಿಸುವಂತೆ ಕೇಳಿದೆ. ರಾಜನಾಥ್ ಸಿಂಗ್ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ ತಮ್ಮ ದೂರಿಗೆ ಸಚಿವಾಲಯ ಸ್ಪಂದಿಸಿತ್ತು ಎಂದು ಸ್ವಾಮಿ ಹೇಳಿಕೊಂಡಿದ್ದಾರೆ. ಆದರೆ, ಶೀಘ್ರದಲ್ಲೇ ರಾಜನಾಥ್ ಸಿಂಗ್ ಅವರನ್ನು ನರೇಂದ್ರ ಮೋದಿ ಬದಲಾಯಿಸಿದರು ಮತ್ತು ಅಮಿತ್ ಶಾ ಅವರನ್ನು ಗೃಹ ಸಚಿವರನ್ನಾಗಿ ಮಾಡಲಾಯಿತು. ಆಗಿನಿಂದ ಅವರು ಅದರ ಮೇಲೆ ಕುಳಿತಿದ್ದಾರೆ ಎಂದು ಟೀಕಿಸಿದ್ದಾರೆ. ಆದಾಗ್ಯೂ, ಸುಬ್ರಮಣಿಯನ್ ಸ್ವಾಮಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ಅಂತಹ ದಾಖಲೆಗಳ ದೃಢೀಕರಣವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ..

ಈಚೆಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗಲಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದರು. ಬಾಂಗ್ಲಾದೇಶದ ಅಶಾಂತಿಯ ಬಗ್ಗೆ ಮೋದಿಯ ಮೇಲೆ ವಾಗ್ದಾಳಿ ನಡೆಸಿದ್ದ ಅವರು, ‘ ಬಾಂಗ್ಲಾದೇಶದಲ್ಲಿ ಲೇಡಿ ಪ್ರಧಾನನಿಯನ್ನು (ಶೇಖ್‌ ಹಸೀನಾ) ಹೊರಹಾಕಿದಾಗ ಮೋದಿ ನಡುಗುತ್ತಿದ್ದಾರೆ’ ಎಂದು ‘ಎಕ್ಸ್‌’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮೋದಿ ಯಾವಾಗ ಬೇಕಿದ್ದರೂ ಕೈಕೊಡಬಹುದು ಎಂದು ವ್ಯಂಗ್ಯವಾಡಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ..| ಛತ್ತೀಸ್‌ಗಡದಲ್ಲಿ 3 ತಿಂಗಳ ಪಡಿತರ ಒಂದೇ ಬಾರಿಗೆ ವಿತರಣೆ ; ಗೇಟ್‌ ಮುರಿದು ಒಳ ನುಗ್ಗಿದ ಜನ ಸಮೂಹ...!

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement