ಓಡಿಹೋದ ಪ್ರೇಮಿಗಳು : ಸೇಡು ತೀರಿಸಿಕೊಳ್ಳಲು ಪ್ರಿಯಕರನ ಸಹೋದರಿ ಮೇಲೆ ಯುವತಿ ಸಂಬಂಧಿಕರಿಂದ ಸಾಮೂಹಿಕ ಅತ್ಯಾಚಾರ…!

ಲೂಧಿಯಾನ: ತನ್ನ ಮಗಳೊಂದಿಗೆ ಪ್ರಿಯಕರನೊಂದಿಗೆ ಓಡಿಹೋದ ನಂತರ ಈ ಅವಮಾನದ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ಮೂವರು ಕುಟುಂಬ ಸದಸ್ಯರೊಂದಿಗೆ ಸೇರಿ ಮಗಳ ಪ್ರಿಯಕರನ ವಿವಾಹಿತ ಸಹೋದರಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗೋರಖಪುರದ ಆರೋಪಿಗಳು ತಮ್ಮ ಮೊಬೈಲ್‌ ಫೋನ್‌ಗಳಲ್ಲಿ ಈ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯು ಮೇ 1 ರಂದು ನಡೆದಿದ್ದರೂ, ಅತ್ಯಾಚಾರ ಸಂತ್ರಸ್ತೆ ತುಂಬಾ ಆಘಾತಕ್ಕೊಳಗಾಗಿದ್ದರಿಂದ ದೀರ್ಘಕಾಲದವರೆಗೆ ಘಟನೆ ಬಗ್ಗೆ ದೂರು ನೀಡಲು ಸಂತ್ರಸ್ತೆಗೆ ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತ ಸಾಮೂಹಿಕ ಅತ್ಯಾಚಾರದ ಆಘಾತದಿಂದ ಚೇತರಿಸಿಕೊಂಡ ನಂತರವೇ ಮಹಿಳೆ ದೂರು ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದರು ಎಂದು ಹೇಳಿದರು.

ನಾಲ್ವರು ಆರೋಪಿಗಳಾದ ರವೀಂದರ್ ಸಿಂಗ್, ಅವರ ಸಹೋದರ ವರೀಂದರ್ ಸಿಂಗ್, ಮಗ ಅಮನ್ ಸಿಂಗ್ ಮತ್ತು ಇನ್ನೊಬ್ಬ ಸಹಚರ ಸಂತೋಷ್ ಸಿಂಗ್ ವಿರುದ್ಧ ಟಿಬ್ಬಾ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ದೂರಿನಲ್ಲಿ ತನ್ನ ಸಹೋದರ ಮತ್ತು ಪ್ರಮುಖ ಆರೋಪಿ ರವೀಂದರ್‌ ಸಿಂಗ್‌ ಮಗಳು ಈ ವರ್ಷದ ಏಪ್ರಿಲ್‌ನಲ್ಲಿ ಓಡಿಹೋಗಿದ್ದಾರೆ ಎಂದು ಹೇಳಿದ್ದಾರೆ.
ಈ ನಾಲ್ವರು ಅವರನ್ನು ಹುಡುಕಿಕೊಂಡು ಮೇ 1 ರಂದು ಮಹಿಳೆ ಮನೆಗೆ ಬಂದರು. ಅಲ್ಲಿ ಅವರು ಕಾಣದ ನಂತರ, ಆರೋಪಿಗಳು ಮಹಿಳೆಯನ್ನು ಬೆದರಿಸಿ ಸೇಡು ತೀರಿಸಿಕೊಳ್ಳಲು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ದೂರು ನೀಡಿದರೆ ಸಾಮಾಜಿಕ ಜಾಲತಾಣಗಳಲ್ಲಿ ಸೆರೆ ಹಿಡಿದ ವೀಡಿಯೊವನ್ನು ಅಪ್ಲೋಡ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದುಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಮಹಿಳೆ ಇಬ್ಬರು ಮಕ್ಕಳ ತಾಯಿ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬಹುಭಾಷಾ ನಟ ಪ್ರದೀಪ ರಾವತ್ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement