ಬೆಂಗಳೂರು : ಎಚ್ಎಂಟಿ ಜಾಗವನ್ನು ಅರಣ್ಯ ಭೂಮಿ ಎಂದು ಪರಿಗಣಿಸಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಹೆಚ್ಎಂಟಿ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಎಚ್ಎಂಟಿ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಎಂಟಿಗೆ ಸೇರಿದ ಸುಮಾರು 590 ಎಕರೆ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡದ ಸುಮಾರು 290 ಎಕರೆ ಜಾಗವನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದು ಅರಣ್ಯ ಇಲಾಖೆಯ ಜಾಗವಾಗಿದ್ದರಿಂದ ವಶಪಡಿಸಿಕೊಳ್ಳಬೇಕು ಎಂದು ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಟಿಪ್ಪಣಿ ಬರೆದಿದ್ದಾರೆ. ನನ್ನ ಮೇಲಿನ ದ್ವೇಷಕ್ಕೆ ಹೀಗೆ ಮಾಡುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ಎಚ್ಎಂಟಿಗೆ ಈ ಜಮೀನನ್ನು ಪುಕ್ಕಟ್ಟೆಯಾಗಿ ನೀಡಿಲ್ಲ. ಇದಕ್ಕೆ ಎಚ್ಎಂಟಿ ಹಣ ನೀಡಿದೆ. ಅಲ್ಲದೆ, ಅರಣ್ಯ ಇಲಾಖೆ ಸಹ ಈ ಹಿಂದೆ ಜಮೀನು ಖರೀದಿಗೆ ಒಪ್ಪಿಗೆ ಕೊಟ್ಟಿತ್ತು. ಈಗ ಯಾಕೆ ಏಕಾಏಕಿ ಖಾಲಿ ಜಾಗ ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ..? ಯಾರಿಗೆ ಹಂಚಲು ಈ ಆದೇಶ ಮಾಡಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಪ್ರಶ್ನಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ