ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತಿದ್ದ ಶಿಲ್ಪಿ ಅರುಣ ಯೋಗಿರಾಜ​ಗೆ ಅಮೆರಿಕ ವೀಸಾ ನಿರಾಕರಣೆ

ಮೈಸೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮ (ರಾಮಲಲ್ಲಾ)ನ ಮೂರ್ತಿ ಕೆತ್ತನೆ ಮಾಡಿದ್ದ ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ ಅವರಿಗೆ ಅಮೆರಿಕ ವೀಸಾ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ಅಮೆರಿಕದದಲ್ಲಿ ಆಯೋಜಿಸಲಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸನ್ಮಾನಿಸಲು ಅವರಿಗೆ ಆಯೋಜಕರಿಂದ ಆಹ್ವಾನ ಬಂದಿತ್ತು. ಹೀಗಾಗಿ 20 ದಿನಗಳ ಪ್ರವಾಸಕ್ಕಾಗಿ ಅರುಣ ಯೋಗಿರಾಜ ಕುಟುಂಬ ಸಹಿತ ಅಮೆರಿಕಕ್ಕೆ ತೆರಳಲು ಎರಡು ತಿಂಗಳ ಹಿಂದೆಯೇ ವೀಸಾಗೆ ಅರ್ಜಿ ಸಲ್ಲಿಸಲಾಗಿತ್ತು. ಬೇಕಾದ ದಾಖಲೆಗಳು, ಪೂರ್ವಾಪರ ಮಾಹಿತಿಗಳು ಹಾಗೂ ಅದಕ್ಕೆ ಬೇಕಾದ ನಿಬಂಧನೆಗಳ ಪೂರ್ಣಗೊಳಿಸಿದರು ಇದೀಗ ವೀಸಾ ನಿರಾಕರಣೆಯಾಗಿದೆ. ಅದನ್ನು ತಿರಸ್ಕರಿಸಲಾಗಿದೆ ಎಂದು ನನಗೆ ಮಾಹಿತಿ ಬಂದಿದೆ. ಎಂದು ಅರುಣ ಯೋಗಿರಾಜ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಇದೇ ಮೊದಲ ಬಾರಿಗೆ ಅಮೆರಿಕಕ್ಕೆ ಹೊರಟು ನಿಂತಿದ್ದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ನನಗೆ ಸಹಕಾರ ದೊರೆತಿತ್ತು. ಆದರೆ, ಅಮೆರಿಕದ ರಾಯಭಾರ ಕಚೇರಿಯಿಂದ ಯಾವುದೇ ನೆರವು ಸಿಕ್ಕಿಲ್ಲ. ಅಕ್ಕ ಸಮ್ಮೇಳನದ ಆಯೋಜಕರು ಕೂಡ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. ತಿರಸ್ಕರಿಸಿರುವ ಅಮೆರಿಕ ರಾಯಭಾರ ಕಚೇರಿ ಇದುವರೆಗೆ ಯಾವುದೇ ಕಾರಣವನ್ನು ನೀಡಿಲ್ಲ ಎನ್ನಲಾಗಿದೆ.
ಅಮೆರಿಕದ ಕನ್ನಡ ಕೂಟಗಳ ಸಂಘ, ವಿಶ್ವ ಕನ್ನಡ ಸಮ್ಮೇಳನ 2024 ಕಾರ್ಯಕ್ರಮವನ್ನು ವರ್ಜೀನಿಯಾದ ರಿಚ್ಮಂಡ್‌ನಲ್ಲಿ ಆಯೋಜಿಸಲಾಗಿದೆ. ಸದ್ಯ ವೀಸಾ ಅರ್ಜಿಯ

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement