ಜಾತ್ಯತೀತ ನಾಗರಿಕ ಸಂಹಿತೆ ಕಾಲದ ಅಗತ್ಯ : ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ಮೋದಿ

ನವದೆಹಲಿ : ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ ಅಗತ್ಯದ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವನ್ನು ವಿಭಜಿಸುವ ಕಾನೂನುಗಳಿಗೆ ಆಧುನಿಕ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ.
“ಸುಪ್ರೀಂಕೋರ್ಟ್ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪದೇ ಪದೇ ಚರ್ಚೆಗಳನ್ನು ನಡೆಸಿದೆ, ಆದೇಶಗಳನ್ನು ನೀಡಿದೆ, ಏಕೆಂದರೆ ದೇಶದ ದೊಡ್ಡ ಭಾಗವು ಪ್ರಸ್ತುತ ನಾಗರಿಕ ಸಂಹಿತೆ ಕೋಮು ನಾಗರಿಕ ಸಂಹಿತೆ, ತಾರತಮ್ಯದ ನಾಗರಿಕ ಸಂಹಿತೆ ಎಂದು ಭಾವಿಸುತ್ತದೆ. ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಂವಿಧಾನ ಹೇಳುತ್ತದೆ, ಸುಪ್ರೀಂ ಕೋರ್ಟ್ ಹೇಳುತ್ತದೆ ಮತ್ತು ಇದು ಸಂವಿಧಾನ ತಯಾರಕರ ಕನಸಾಗಿತ್ತು, ಆದ್ದರಿಂದ ಅದನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಪ್ರಧಾನಿ ಕೆಂಪು ಕೋಟೆಯ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಹೇಳಿದರು.
ಈ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯಬೇಕು, ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯಗಳೊಂದಿಗೆ ಮುಂದೆ ಬರಬೇಕು ಮತ್ತು ಧಾರ್ಮಿಕ ನೆಲೆಯಲ್ಲಿ ದೇಶವನ್ನು ವಿಭಜಿಸುವ ಕಾನೂನುಗಳನ್ನು ತೆಗೆದುಹಾಕಬೇಕು, ಆಧುನಿಕ ಸಮಾಜದಲ್ಲಿ ಅವುಗಳಿಗೆ ಸ್ಥಾನವಿಲ್ಲ, ಸಮಯವು ಜಾತ್ಯತೀತ ನಾಗರಿಕ ಸಂಹಿತೆಯನ್ನು ಬಯಸುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

ಈ ಹಿಂದೆ ಲೋಕಸಭೆ ಚುನಾವಣೆಯ ಬಿಜೆಪಿ ಪ್ರಣಾಳಿಕೆಯು ರಾಷ್ಟ್ರದ ಹಿತದೃಷ್ಟಿಯಿಂದ ಪಕ್ಷವು ಏಕರೂಪ ನಾಗರಿಕ ಸಂಹಿತೆಯನ್ನು ಪರಿಗಣಿಸುತ್ತದೆ ಎಂದು ಹೇಳಿತ್ತು. ಬಿಜೆಪಿ ನೇತೃತ್ವದ ಹಲವು ರಾಜ್ಯ ಸರ್ಕಾರಗಳು ಈಗಾಗಲೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಮುಂದಾಗಿವೆ.
ಈ ಹಿನ್ನಲೆಯಲ್ಲಿ, ಪ್ರಧಾನಿಯವರ ಸ್ವಾಂತ್ರ್ಯೋತ್ಸವದ ಭಾಷಣದಲ್ಲಿ ಇದರ ಉಲ್ಲೇಖವು ದೇಶದ ಮಟ್ಟದಲ್ಲಿಯೇ ಇದನ್ನುಜಾರಿಗೆ ತರಬೇಕು ಎಂಬ ಸರ್ಕಾರದ ಉದ್ದೇಶವನ್ನು ಇದು ಸೂಚಿಸುತ್ತವೆ.
ಬಾಂಗ್ಲಾದೇಶದಲ್ಲಿನ ಹಿಂದೂಗಳ ಸುರಕ್ಷತೆಯ ಬಗ್ಗೆ 140 ಕೋಟಿ ಭಾರತೀಯರು ಚಿಂತಿತರಾಗಿದ್ದಾರೆ. ಅಲ್ಲಿನ ಹಿಂದೂಗಳು ಪ್ರಧಾನಿ ಹಸೀನಾ ಶೇಖ್ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದಲ್ಲಿ ನಡೆದ ಇತ್ತೀಚಿನ ರಾಜಕೀಯ ಅಶಾಂತಿಯ ಸಂದರ್ಭದಲ್ಲಿ ದಾಳಿಗಳನ್ನು ಎದುರಿಸುತ್ತಿದ್ದಾರೆ. ಭಾರತವು ಯಾವಾಗಲೂ ಬಾಂಗ್ಲಾದೇಶದ ಪ್ರಗತಿಯ ಹಿತೈಷಿಯಾಗಿರುತ್ತದೆ. ಬಾಂಗ್ಲಾದೇಶದಲ್ಲಿ ಪರಿಸ್ಥಿತಿಯು ಶೀಘ್ರದಲ್ಲೇ ಸಾಮಾನ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ. ಭಾರತೀಯರು ಬಾಂಗ್ಲಾದೇಶದ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಭದ್ರತೆಯನ್ನು ರಕ್ಷಿಸಬೇಕು ಎಂದು ಬಯಸುತ್ತಾರೆ ಎಂದು ಹೇಳಿದರು.

ವಸಾಹತುಶಾಹಿ ನೊಗವನ್ನು ಉರುಳಿಸಲು ಕೇವಲ 40 ಕೋಟಿ ಭಾರತೀಯರು ಹೇಗೆ ಮಹಾಶಕ್ತಿಯನ್ನು ಸೋಲಿಸಿದರು ಎಂಬುದನ್ನು ವಿವರಿಸುವ ಮೂಲಕ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಆಗ ಅವರು ಭಾರತೀಯರು ಈಗ 140 ಕೋಟಿ ಇದ್ದಾರೆ ಎಂದು ಒತ್ತಿ ಹೇಳಿದರು.
“ನಾವು ಈಗ 140 ಕೋಟಿಗಳಾಗಿದ್ದೇವೆ. ಈ 140 ಕೋಟಿ ಭಾರತೀಯರು ಒಟ್ಟಾಗಿ ಸಾಗಿದರೆ, ಯಾವುದೇ ಸವಾಲುಗಳಿದ್ದರೂ, ನಾವು ಎಲ್ಲಾ ಅಡೆತಡೆಗಳನ್ನು ನಿವಾರಿಸಿ 2047 ರ ವೇಳೆಗೆ ವಿಕಸಿತ ಭಾರತದ ಕನಸನ್ನು ಸಾಧಿಸಬಹುದು” ಎಂದು ಮೋದಿ ಹೇಳಿದರು.
ವಿಕಸಿತ ಭಾರತ 2047 ಕ್ಕಾಗಿ ಸಲಹೆಗಳ ಕೋರಿಕೆಗೆ ಬಡವರು, ರೈತರು, ಬುಡಕಟ್ಟು ಜನರು ಮತ್ತು ನಗರಗಳಲ್ಲಿ ವಾಸಿಸುವವರು ಸೇರಿದಂತೆ ಭಾರತೀಯರಿಂದ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement