ರೈತರ ಕುರಿತು ವಿವಾದಾತ್ಮಕ ಹೇಳಿಕೆ : ತಮ್ಮದೇ ಪಕ್ಷದ ಸಂಸದೆಗೆ ಬಿಜೆಪಿಯಿಂದ ಪಾಠ…!

ನವದೆಹಲಿ : ರೈತರ ಪ್ರತಿಭಟನೆ ಕುರಿತ ಹೇಳಿಕೆ ವಿವಾದಕ್ಕೆ ಕಾರಣವಾದ ನಂತರ ನಟಿ-ರಾಜಕಾರಣಿ ಕಂಗನಾ ರಣಾವತ್ ಅವರಿಗೆ ಬಿಜೆಪಿ ನಾಯಕತ್ವವು ಛೀಮಾರಿ ಹಾಕಿದೆ. ಅಲ್ಲದೆ ಕಂಗನಾ ರಣಾವತ್ ಅವರ ಹೇಳಿಕೆಗಳು ಪಕ್ಷದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
38ರ ಹರೆಯದ ಬಿಜೆಪಿ ಸಂಸದರು ಸರಕಾರ ಕೈಗೊಂಡಿರುವ ದೃಢವಾದ ಕ್ರಮಗಳಿರದಿದ್ದಲ್ಲಿ ರೈತರ ಪ್ರತಿಭಟನೆಯು ಭಾರತದಲ್ಲಿ ಬಾಂಗ್ಲಾದೇಶದಂತಹ ಬಿಕ್ಕಟ್ಟಿಗೆ ಕಾರಣವಾಗಬಹುದೆಂದು ಹೇಳಿದ ಒಂದು ದಿನದ ನಂತರ ಬಿಜೆಪಿ ಈ ಹೇಳಿಕೆಗೆ ಅಸಮ್ಮತಿ ಸೂಚಿಸಿದ್ದು, ಹೇಳಿಕೆಯನ್ನು ಖಂಡಿಸಿದೆ.
“ಪಕ್ಷದ ಪರವಾಗಿ ನೀತಿ ವಿಷಯಗಳ ಬಗ್ಗೆ ಮಾತನಾಡಲು ಕಂಗನಾ ರಣಾವತ್ ಅವರಿಗೆ ಅಧಿಕಾರವಿಲ್ಲ ಮತ್ತು ಹಾಗೆ ಮಾಡಲು ಅನುಮತಿ ನೀಡಲಾಗಿಲ್ಲ. ಭವಿಷ್ಯದಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ಬಿಜೆಪಿ ರಣಾವತ್ ಅವರಿಗೆ ಸೂಚಿಸಿದೆ” ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೂ ಮೊದಲು, ಹರಿಯಾಣ ಮತ್ತು ಪಂಜಾಬ್‌ನ ಬಿಜೆಪಿ ನಾಯಕರು ಹಿಮಾಚಲ ಪ್ರದೇಶದ ಮಂಡಿ ಸಂಸದರಿಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಂತೆ ಸಲಹೆ ನೀಡಿದ್ದರು. “ರೈತರ ಬಗ್ಗೆ ಮಾತನಾಡುವುದು ಕಂಗನಾ ಅವರಿಗೆ ಸಂಬಂಧಿಸಿದ್ದಲ್ಲ , ಕಂಗನಾ ಅವರ ಹೇಳಿಕೆ ವೈಯಕ್ತಿಕವಾಗಿದೆ, ಪ್ರಧಾನಿ ಮೋದಿ ಮತ್ತು ಬಿಜೆಪಿ ರೈತ ಸ್ನೇಹಿಯಾಗಿದೆ, ವಿರೋಧ ಪಕ್ಷಗಳು ನಮ್ಮ ವಿರುದ್ಧ ಕೆಲಸ ಮಾಡುತ್ತಿವೆ ಮತ್ತು ಕಂಗನಾ ಹೇಳಿಕೆ ಅದೇ ರೀತಿ ಮಾಡುತ್ತಿದೆ, ಅವರು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಪಂಜಾಬ್ ಬಿಜೆಪಿ ನಾಯಕ ಹರ್ಜಿತ್ ಗ್ರೆವಾಲ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಒಮಾನ್‌ ಕರಾವಳಿಯಲ್ಲಿ ಮುಳುಗುತ್ತಿದ್ದ ನೌಕೆಯಲ್ಲಿದ್ದ 14 ಭಾರತೀಯರನ್ನು ರಕ್ಷಿಸಿದ ಅಮೆರಿಕ ನೌಕಾಪಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement