ಕಿರಿಯ ವೈದ್ಯೆ ಅತ್ಯಾಚಾರ-ಕೊಲೆ | ಕೋಲ್ಕತ್ತಾದ ಬೀದಿಗಳಲ್ಲಿ ಆಕ್ರೋಶ ; ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಕೋಲ್ಕತ್ತಾ : ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಖಂಡಿಸಿ ಮಂಗಳವಾರ ಕೋಲ್ಕತ್ತಾದಲ್ಲಿ ‘ನಬಣ್ಣ ಅಭಿಜನ’ ಪ್ರತಿಭಟನಾ ಮೆರವಣಿಗೆ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋದ ನಂತರ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ಲಾಠಿ ಚಾರ್ಜ್ ನಡೆಸಿದರು.
ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ಎಸೆದರು ಮತ್ತು ಹೌರಾ ಸೇತುವೆಯಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದರು. ಆರ್‌.ಜಿ. ಕರ್ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಸಚಿವಾಲಯದತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಬಳಸಿದರು. ಲಾಠಿಚಾರ್ಜ್ ನಡೆಸಿದರು.
ಕೋಲ್ಕತ್ತಾ ಪೊಲೀಸರ ಮೂರು ಹಂತದ ಭದ್ರತೆಯನ್ನು ಮುರಿಯಲು ಯತ್ನಿಸಿದ ಪ್ರತಿಭಟನಾಕಾರರು ಹೌರಾ ಸೇತುವೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ಹತ್ತಿ ತ್ರಿವರ್ಣ ಧ್ವಜವನ್ನು ಬೀಸಿದರು. ಕೋಲ್ಕತ್ತಾದ ಹೌರಾ ಸೇತುವೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು, ಜಲಫಿರಂಗಿಗಳನ್ನು ಬಳಸಿದರು.

ನಬನ್ನಾ ಅಭಿಜನ್ ಪ್ರತಿಭಟನಾ ಮೆರವಣಿಗೆ ಸಮಯದಲ್ಲಿ “ದೊಡ್ಡ ಪ್ರಮಾಣದ ಹಿಂಸಾಚಾರವನ್ನು ಆಯೋಜಿಸಲು” ಯೋಜಿಸಿದ್ದಕ್ಕಾಗಿ ನಾಲ್ವರನ್ನು ಮೆರವಣಿಗೆ ಮುಂಚಿತವಾಗಿ ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಕೊಲೆ ಮತ್ತು ಕೊಲೆಯ ಯತ್ನದ ಪಿತೂರಿಯಲ್ಲಿ” ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕೂ ಮುನ್ನ ಬಿಜೆಪಿಯ ಸುವೇಂದು ಅಧಿಕಾರಿ ಮಾತನಾಡಿ, ನಾಲ್ವರು ವಿದ್ಯಾರ್ಥಿ ಕಾರ್ಯಕರ್ತರು ಮಧ್ಯರಾತ್ರಿಯ ನಂತರ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿದ್ದರು.
ರಾಜ್ಯ ಸಚಿವಾಲಯದ ಬಳಿ 20ಕ್ಕೂ ಹೆಚ್ಚು ಕಡೆ ಕಬ್ಬಿಣ ಮತ್ತು ಅಲ್ಯೂಮಿನಿಯಂ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಪ್ರತಿಭಟನಕಾರರು ಕಟ್ಟಡಗಳನ್ನು ಏರಲು ಮತ್ತು ದಾಟಲು ಜಾರುವಂತೆ ಮಾಡಲು ಪೊಲೀಸರು ಬ್ಯಾರಿಕೇಡ್‌ಗಳ ಮೇಲೆ ಎಣ್ಣೆಯನ್ನು ಸಹ ಲೇಪಿಸಿದ್ದಾರೆ.
ಹೌರಾದ ಪಶ್ಚಿಮ ಬಂಗಾಳದ ಸಚಿವಾಲಯಕ್ಕೆ ಹೋಗುವ ಮಾರ್ಗಗಳಲ್ಲಿ 6,000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಹೆವಿ ರೇಡಿಯೋ ಫ್ಲೈಯಿಂಗ್ ಸ್ಕ್ವಾಡ್‌ಗಳು (ಎಚ್‌ಆರ್‌ಎಫ್‌ಎಸ್), ರ್ಯಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್), ಮತ್ತು ಕ್ವಿಕ್ ರಿಯಾಕ್ಷನ್ ಟೀಮ್‌ಗಳು (ಕ್ಯೂಆರ್‌ಟಿಗಳು) ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಪಡೆಗಳನ್ನು ತರಲಾಗಿದೆ. ಪ್ರತಿಭಟನಾಕಾರರ ಚಲನವಲನಗಳ ಮೇಲೆ ನಿಗಾ ಇಡಲು ಡ್ರೋನ್ ಮತ್ತು ರೋಬೋಕಾಪ್‌ಗಳನ್ನು ಬಳಸಲಾಗುತ್ತಿದೆ. ಪ್ರತಿಭಟನಾ ಸ್ಥಳದಲ್ಲಿ ಗಲಭೆ ನಿಗ್ರಹ ವಜ್ರ ವಾಹನಗಳೂ ಇವೆ.

ಪಶ್ಚಿಮ ಬಂಗಾಳ ಪೊಲೀಸರು ಪ್ರತಿಭಟನಾ ಮೆರವಣಿಗೆ “ಕಾನೂನುಬಾಹಿರ” ಎಂದು ಹೇಳಿದ್ದಾರೆ ಮತ್ತು ನಬಣ್ಣ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿಗೆ ನೀಡಿದ ಯಾವುದೇ ಮನವಿಯನ್ನು ಸ್ವೀಕರಿಸಲಿಲ್ಲ.
ನೋಂದಣಿಯಾಗದ ವಿದ್ಯಾರ್ಥಿ ಗುಂಪು ಪಶ್ಚಿಮ ಬಂಗಾ ಛತ್ರ ಸಮಾಜ ಎಂದು ಹೆಸರಿನಲ್ಲಿ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಲಾಗಿದೆ. ರವೀಂದ್ರ ಭಾರತಿ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿ ಪ್ರಬೀರ ದಾಸ್, ಕಲ್ಯಾಣಿ ವಿಶ್ವವಿದ್ಯಾನಿಲಯದ ಶುಭಾಂಕರ ಹಲ್ದರ್‌ ಮತ್ತು ರವೀಂದ್ರ ಮುಕ್ತ ವಿಶ್ವವಿದ್ಯಾಲಯದ ಸಯಾನ್ ಲಾಹಿರಿ ಅವರು ರ‍್ಯಾಲಿಯನ್ನು ಆಯೋಜಿಸಿದ್ದಾರೆ. 31 ವರ್ಷದ ಟ್ರೈನಿ ವೈದ್ಯರಿಗೆ ನ್ಯಾಯ, ಅಪರಾಧಿಗೆ ಮರಣದಂಡನೆ ಮತ್ತು ಮಮತಾ ಬ್ಯಾನರ್ಜಿ ರಾಜೀನಾಮೆಗೆ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿದೆ.

ಘಟನೆಯ ವಿರುದ್ಧ ಆಗಸ್ಟ್ 9 ರಿಂದ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಮತ್ತು ಎಡ ವಿದ್ಯಾರ್ಥಿ ಸಂಘಟನೆಗಳು ಈ ‘ನಬಣ್ಣ ಅಭಿಜನ’ ಪ್ರತಿಭಟನಾ ಮೆರವಣಿಗೆಯಿಂದ ದೂರ ಸರಿದಿವೆ.
ಪ್ರತಿಭಟನಾ ಮೆರವಣಿಗೆಯ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೇಳಿಕೊಂಡಿದೆ.ಬಿಜೆಪಿ ಈ ಆರೋಪಗಳನ್ನು ಬಲವಾಗಿ ತಳ್ಳಿಹಾಕಿದೆ, ಅವರು ರ್ಯಾಲಿಯೊಂದಿಗೆ ಸಂಬಂಧ ಹೊಂದಿಲ್ಲ, ಆದರೆ ಚಳವಳಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಆಗಸ್ಟ್ 9 ರಂದು, ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ 31 ವರ್ಷದ, ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯ ಅರೆಬೆತ್ತಲೆ ಶವ ಪತ್ತೆಯಾಗಿತ್ತು. ಮರುದಿನ ಕೋಲ್ಕತ್ತಾ ಪೊಲೀಸರಿಗೆ ಸಂಬಂಧಿಸಿದ ನಾಗರಿಕ ಸ್ವಯಂಸೇವಕ ಸಂಜಯ ರಾಯ್ ಎಂಬಾತನನ್ನು ಬಂಧಿಸಲಾಯಿತು.

ಪ್ರಮುಖ ಸುದ್ದಿ :-   ವೀಡಿಯೊ..| ಇರಾನ್ ಮೇಲೆ ದಾಳಿ ಮಾಡಿ ವಾಪಸ್‌ ಆಗುತ್ತಿರುವ ಬಿ -2 ಬಾಂಬರ್‌ ವೀಡಿಯೊ ಹಂಚಿಕೊಂಡ ಅಮೆರಿಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement