ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಎಸೆಯುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಾಗೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, 15 ರಿಂದ 20 ಹಸುಗಳು ಸಾವಿಗೀಡಾಗಿವೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ, ಆದರೂ ಇದು ಇನ್ನೂ ದೃಢೀಕರಿಸಲ್ಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲ್ವೆ ಸೇತುವೆಯಿಂದ ಹಸುಗಳನ್ನು ಎಸೆದರು…
ಮಂಗಳವಾರ ಸಂಜೆ ಹಸುಗಳನ್ನು ಬಮ್ಹೋರ್ ಬಳಿಯ ರೈಲ್ವೆ ಸೇತುವೆಯಿಂದ ಸತ್ನಾ ನದಿಗೆ ಎಸೆಯುತ್ತಿರುವ ವೀಡಿಯೊ ಹೊರಬಿದ್ದಿದೆ ಎಂದು ನಾಗೋಡ್ ಪೊಲೀಸ್ ಠಾಣೆ ಪ್ರಭಾರಿ ಅಶೋಕ್ ಪಾಂಡೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಂಡವನ್ನು ಕಳುಹಿಸಿದ್ದು, ನಂತರ ಪ್ರಕರಣ ದಾಖಲಿಸಿದ್ದಾರೆ.
ನಾಲ್ವರ ವಿರುದ್ಧ ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಬೇಟಾ ಬಗ್ರಿ, ರವಿ ಬಗ್ರಿ, ರಾಂಪಾಲ ಚೌಧರಿ ಮತ್ತು ರಾಜ್ಲು ಚೌಧರಿ ವಿರುದ್ಧ ಗೋಹತ್ಯೆಯನ್ನು ನಿಷೇಧಿಸುವ ಮಧ್ಯಪ್ರದೇಶ ಗೌವಂಶ್ ವಧ್ ಪ್ರತಿಶೋಧ್ ಅಧಿನಿಯಮದ ಅಡಿಯಲ್ಲಿ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಾಮಾಜಿಕ ಮಾಧ್ಯಮಗಳ ಮೂಲಕ ವಿಷಯ ಗಮನಕ್ಕೆ ಬಂದ ತಕ್ಷಣ, ಅಪರಾಧ ಸಂಖ್ಯೆ 535/24 ಕಲಂ 325, 3(5) ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್), 4/9 ಅನ್ನು ನಾಗೋಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಗೋಹತ್ಯೆ ನಿಷೇಧ ಕಾಯ್ದೆ 2004 ರ ಅಡಿಯಲ್ಲಿ ಅಪರಾಧವನ್ನು ದಾಖಲಿಸಲಾಗಿದೆ ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ಸತ್ನಾ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಸುಮಾರು 50 ಹಸುಗಳನ್ನು ನದಿಗೆ ಎಸೆಯಲಾಗಿದ್ದು, 15 ರಿಂದ 20 ಹಸುಗಳು ಸಾವಿಗೀಡಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ತನಿಖೆಯ ನಂತರ ಹಾನಿಗೊಳಗಾದ ಹಸುಗಳ ನಿಖರ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ. ಪೊಲೀಸರು ತನಿಖೆ ಮುಂದುವರೆಸಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಶ್ರೀಕಂಠ ಬಾಳಗಂಚಿ
ನದಿಗೆ ಗೋಮಾತೆಯನ್ನು ಎಸೆದ ರೀತಿಯಲ್ಲೇ ಆ ದುರುಳರನ್ನೂ ಎಸೆದಾಗಲೇ, ಮುಂದೇ ಈ ರೀತಿಯ ತಪ್ಪುಗಳನ್ನು ಮಾಡುವುದನ್ನು ತಪ್ಪಿಸಬಹುದು. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು