ಕುಪ್ವಾರ (ಜಮ್ಮು-ಕಾಶ್ಮೀರ) : ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕುಮ್ಕಾಡಿ ಪ್ರದೇಶ ಮತ್ತು ತಂಗ್ಧರ್ ಸೆಕ್ಟರ್ನಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಸಂಭಾವ್ಯ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಗುಪ್ತಚರ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು.
ಭದ್ರತಾ ಪಡೆಗಳು ಆಗಸ್ಟ್ 28-29 ರ ರಾತ್ರಿ ಕುಪ್ವಾರಾ ಜಿಲ್ಲೆಯ ತಂಗ್ಧರ್ ಸೆಕ್ಟರ್ನಲ್ಲಿ ಜಂಟಿಯಾಗಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ, ಒಬ್ಬ ಭಯೋತ್ಪಾದಕನನ್ನು ತಂಗ್ಧರ್ ಸೆಕ್ಟರ್ನಲ್ಲಿ ಕೊಲ್ಲಲಾಗಿದೆ ಎಂದು ನಂಬಲಾಗಿದೆ. ಆದರೆ ಇಬ್ಬರು ಕುಪ್ವಾರದ ಕುಮ್ಕಾಡಿ ಪ್ರದೇಶದಲ್ಲಿ ಕೊಲ್ಲಲ್ಪಟ್ಟರು.
ಖೇರಿ ಮೊಹ್ರಾ ಲಾಠಿ ಮತ್ತು ದಂತಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ 9:30ರ ಸುಮಾರಿಗೆ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೇನಾಪಡೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದೆ. ಶೋಧನಾ ಕಾರ್ಯಾಚರಣೆ ವೇಳೆ ರಾತ್ರಿ 11:45 ರ ಸುಮಾರಿಗೆ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಈ ವೇಳೆ ಸೇನಾಪಡೆ ಕೂಡ ದಿಟ್ಟ ಉತ್ತರ ನೀಡಿದ್ದು, ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ