ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನಗೆ ಟಿವಿ ನೀಡಲಾಗಿದೆ. ದರ್ಶನ್ ಇರುವ ಸೆಲ್ಗೆ ಟಿವಿ ಅಳವಡಿಸಲಾಗಿದೆ.ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಕೆ ಮಾಡಿದ್ದಾರೆ.
ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. ಅದರೆ ಟಿವಿ ದುರಸ್ತಿಗೆ ಹೋಗಿದ್ದ ಹಿನ್ನೆಲೆಯಲ್ಲಿ ನೀಡಿರಲಿಲ್ಲ. ಈಗ ದರ್ಶನ್ ಇರುವ ಸೆಲ್ಗೆ ಟಿವಿ ನೀಡಲಾಗಿದೆ.
ಜಾರ್ಜ್ಶೀಟ್ ಸಲ್ಲಿಕೆ ಸೇರಿದಂತೆ ಹೊರ ಜಗತ್ತಿನ ವಿಷಯ ತಿಳಿದುಕೊಳ್ಳವ ಕುತೂಹಲ ಇರುವ ಹಿನ್ನೆಲೆ, ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. ಅದರೆ ಟಿವಿ ರಿಪೇರಿ ಇದ್ದ ಹಿನ್ನೆಲೆ ಈವರೆಗೂ ನೀಡಿರಲಿಲ್ಲ. ಆದರೆ, ಇಂದು ದರ್ಶನ್ ಇರುವ ಸೆಲ್ಗೆ ಟಿವಿ ನೀಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ