ಬೆಳಗಾವಿ: ಸಾರ್ವಜನಿಕ ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಬೆಳಗಾವಿ ನಗರದ ಪಾಟೀಲ ಗಲ್ಲಿಯಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಪಾಟೀಲ ಗಲ್ಲಿಯ ನಿವಾಸಿ ಸದಾನಂದ ಚವ್ಹಾಣ ಪಾಟೀಲ(48) ಎಂದು ಗುರುತಿಸಲಾಗಿದೆ. ಮತ್ತೊಬ್ಬರಾದ ವಿಜಯ ರಾಜಗೋಳ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಸೇತುವೆಯಿಂದ ಕಪಿಲೇಶ್ವರ ದೇವಸ್ಥಾನದ ಕಡೆಗೆ ಸಾರ್ವಜನಿಕ ಗಣಪತಿ ಮೂರ್ತಿಯನ್ನು ಒಯ್ಯುತ್ತಿದ್ದಾಗ ಟ್ರ್ಯಾಕ್ಟರ್ ಟ್ರಾಲಿ ಹರಿದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡಿದ್ದ ಸದಾನಂದ ಚವ್ಹಾಣ ಪಾಟೀಲ ಅವರನ್ನು ಬಿಮ್ಸ್ ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ