ಜಾತಿ ನಿಂದನೆ ಪ್ರಕರಣ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.
ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ ನೀಡಿದ್ದ ದೂರಿನ ಅನ್ವಯ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ಪುರಸ್ಕರಿಸಿದ್ದಾರೆ. ಮುನಿರತ್ನ ಅವರು ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಇಬ್ಬರ ಭದ್ರತೆ ಒದಗಿಸಬೇಕು. ಸಾಕ್ಷ್ಯ ನಾಶ ಮಾಡುವ ಪ್ರಯತ್ನ ಮಾಡಬಾರದು. ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರಹೋಗುವಂತಿಲ್ಲ ಎಂಬ ಷರತ್ತುಗಳನ್ನು ನ್ಯಾಯಾಲಯವು ವಿಧಿಸಿದೆ.

ಲಂಚಕ್ಕೆ ಬೇಡಿಕೆ ಹಾಗೂ ಬೆದರಿಕೆ ಪ್ರಕರಣದಲ್ಲಿ ಬುಧವಾರ ಮುನಿರತ್ನ ಅವರಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
ಬಿಜೆಪಿ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯಲ್ಲಿ ಬುಧವಾರ ಮಾಜಿ ಸಚಿವ ಮುನಿರತ್ನ ಹಾಗೂಇತರ ಆರು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮುನಿರತ್ನ, ಅವರ ಅಂಗರಕ್ಷಕ ವಿಜಯಕುಮಾರ, ಸುಧಾಕರ, ಕಿರಣಕುಮಾರ, ಲೋಹಿತ್‌, ಮಂಜುನಾಥ ಮತ್ತು ಲೋಕಿ ಎಂಬವರು ಆರೋಪಿಗಳಾಗಿದ್ದಾರೆ. ಅವರ ಮೇಲೆ ಐಪಿಸಿ ಸೆಕ್ಷನ್‌ಗಳಾದ 354A, 354C, 376, 506, 504, 120(b), 149, 384, 406, 308 ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement