ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡ(SIT)ದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ವೈಯಾಲಿಕಾವಲ್ ಅವರ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್ಎಸ್ಎಲ್ ತಂಡದೊಟ್ಟಿಗೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನ್ಯಾಯಾಂಗ ಬಂಧನದಲ್ಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ