ಸಾವರ್ಕರ್ ಮಾನನಷ್ಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಕ್ಟೋಬರ್ 23 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. .
ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ವೀರ್‌ ಸಾವರ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ವಕೀಲ ಸಂಗ್ರಾಮ್ ಕೊಲ್ಹಟ್ಕರ್ ಪ್ರತಿನಿಧಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ. ಮಾರ್ಚ್ 5, 2023 ರಂದು ಲಂಡನ್‌ನಲ್ಲಿ ರಾಹುಲ್‌ ಗಾಂಧಿಯವರ ಹೇಳಿಕೆಗಳನ್ನು ಅನುಸರಿಸಿ, ಏಪ್ರಿಲ್ 2023 ರಲ್ಲಿ ಪುಣೆ ಮ್ಯಾಜಿಸ್ಟ್ರೇಟ್‌ ಗೆ ಸತ್ಯಕಿ ಸಾವರ್ಕರ್ ಅವರು ಔಪಚಾರಿಕವಾಗಿ ದೂರು ಸಲ್ಲಿಸಿದರು, ಕಾಂಗ್ರೆಸ್ ನಾಯಕ ಉದ್ದೇಶಪೂರ್ವಕವಾಗಿ ಸುಳ್ಳು ಮತ್ತು ಹಾನಿಕರ ಆರೋಪಗಳನ್ನು ಮಾಡಿದ್ದಾರೆ ಮತ್ತು ಸಾವರ್ಕರ್ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ. ತಮಗೆ ಮತ್ತು ತಮ್ಮ ಕುಟುಂಬಕ್ಕೆ ಮಾನಸಿಕ ಯಾತನೆ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ವರ್ಷದ ಆರಂಭದಲ್ಲಿ, ಪುಣೆ ನ್ಯಾಯಾಲಯವು ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ನ ಸೆಕ್ಷನ್ 202 ರ ಅಡಿಯಲ್ಲಿ ಮಾನನಷ್ಟ ದೂರನ್ನು ತನಿಖೆ ಮಾಡಲು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿತು.
2023ರ ಮಾರ್ಚ್‌ನಲ್ಲಿ ಲಂಡನ್‌ನಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಲ್ಲಿ, ವಿ.ಡಿ. ಸಾವರ್ಕರ್ ತನ್ನ ಸ್ನೇಹಿತರೊಂದಿಗೆ ಮುಸ್ಲಿಂ ವ್ಯಕ್ತಿಯನ್ನು ಥಳಿಸಿರುವ ಬಗ್ಗೆ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಹೇಳಿದ್ದರು, ಹಿಂಸಾಚಾರವನ್ನು ನಡೆಸಲು ಸಾವರ್ಕರ್ ಸಂತೋಷಪಡಿತ್ತಿದ್ದರು ಎಂದು ಕೂಡ ಹೇಳಿದ್ದರು ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಅಂತಹ ಯಾವುದೇ ಘಟನೆ ನಡೆದಿಲ್ಲ ಅಥವಾ ಘಟನೆಯ ಬಗ್ಗೆ ಯಾವುದೇ ಲಿಖಿತ ದಾಖಲೆಗಳಿಲ್ಲ ಎಂದು ಸತ್ಯಕಿ ಸಾವರ್ಕರ್ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಆರೋಪಗಳು “ಕಾಲ್ಪನಿಕ, ಸುಳ್ಳು ಮತ್ತು ದುರುದ್ದೇಶಪೂರಿತ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನಲ್ಲಿ ನೀರು ವಿವಾದ: ಕೇಂದ್ರ ಸಚಿವರ ಇಬ್ಬರು ಸೋದರಳಿಯಂದಿರ ನಡುವೆ ಗುಂಡಿನ ಚಕಮಕಿ, ಓರ್ವ ಸಾವು

ಈ ಪ್ರತಿಪಾದನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು. ವಿಶ್ರಂಬಾಗ್ ಪೊಲೀಸ್ ಠಾಣೆಯ ಆರಂಭಿಕ ತನಿಖೆಯಲ್ಲಿ ರಾಹುಲ್‌ ಗಾಂಧಿ ಬಗ್ಗೆ ಸತ್ಯಕಿ ಸಾವರ್ಕರ್ ಅವರ ದೂರಿನಲ್ಲಿ ಪ್ರಾಥಮಿಕ ಸತ್ಯವಿದೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ಈ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಜೆಎಂಎಫ್‌ಸಿ) ನ್ಯಾಯಾಲಯದಿಂದ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 500 ರ ಅಡಿಯಲ್ಲಿ ಮಾನನಷ್ಟ ಆರೋಪಗಳ ವಿರುದ್ಧ ಉತ್ತರಿಸಲು ಅವರ ಉಪಸ್ಥಿತಿಯು ಅಗತ್ಯವಾಗಿರುವುದರಿಂದ ರಾಹುಲ್‌ ಗಾಂಧಿಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಸತ್ಯಕಿ ಸಾವರ್ಕರ್ ಅವರನ್ನು ಪ್ರತಿನಿಧಿಸುವ ವಕೀಲ ಸಂಗ್ರಾಮ್ ಕೊಲ್ಹಟ್ಕರ್ ತಿಳಿಸಿದ್ದಾರೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement