ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ : ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಿತ ಮುಡಾ ಹಗರಣದ ಪರಿಣಾಮ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ ಪದೇಪದೇ ಪ್ರಸ್ತಾಪಿಸಿದ್ದರು. ಇದು ಸಹ ಚುನಾವಣೆ ವೇಳೆ ಪರಿಣಾಮ ಬೀರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಆ ಮಾತನ್ನು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಆದರೆ ನೋಟಿಸ್ ಕೊಡುತ್ತಾರೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ, ಆದರೆ ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದರು. ಎಐಸಿಸಿ ನಾಯಕರು ಯಾಕೆ ನನಗೆ ಎಚ್ಚರಿಕೆ ನೀಡುತ್ತಾರೆ? ನಾನು ಕಾಂಗ್ರೆಸ್​ನ ಹಿರಿಯ ನಾಯಕ. ನನ್ನ ಅಭಿಪ್ರಾಯವನ್ನ ನಾನು ಹೇಳಿದ್ದೇನೆ.
ಕಾಂತರಾಜ ವರದಿ ಕೇವಲ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಜನಗಣತಿ ಮಾತ್ರವಲ್ಲ. ಅದು ಜಾತಿ ಜನಗಣತಿ ಕೂಡ ಹೌದು. ಅವೈಜ್ಞಾನಿಕ ಅಂದರೆ ಹೇಗೆ ಅಂತ ಅರ್ಥವಾಗುತ್ತಿಲ್ಲ. ಜಾತಿ ಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದು ನನಗೆ ಅನಿಸುವುದಿಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement