ವೀಡಿಯೊ..| ಶಿವಮೊಗ್ಗ: ಕಾರು ನಿಲ್ಲಿಸುವಂತೆ ಸೂಚಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಎಳೆದೊಯ್ದ ಕಾರು ಚಾಲಕ…!

ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಸಹ್ಯಾದ್ರಿ ಕಾಲೇಜು ಬಳಿ ಅಧಿಕಾರಿಗಳು ನಿತ್ಯ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಆ ಮಾರ್ಗದಲ್ಲಿ ಹೋಗುತ್ತಿದ್ದ ಕಾರೊಂದರ ಚಾಲಕನಿಗೆ ಕಾರು ನಿಲ್ಲಿಸುವಂತೆ ಟ್ರಾಫಿಕ್‌ ಪೊಲೀಸ್ ಸೂಚಿಸಿದ್ದಾರೆ. ಆದರೆ ಆತ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಕೂಡಲೇ ಕಾರಿನ ಮುಂಭಾಗ ಹಿಡಿದ ಪೊಲೀಸ್ ಸಿಬ್ಬಂದಿ ಬಾನೆಟ್ ಮೇಲೆ ಹತ್ತಿದ್ದಾರೆ. ಆಗ ಕಾರು ಚಾಲಕ ವಾಹನ ಚಲಾಯಿಸಿದ್ದಾನೆ.
ಕಾರು ಚಾಲಕ ಸಹ್ಯಾದ್ರಿ ಕಾಲೇಜಿನ‌‌ ಎರಡನೇ ಗೇಟ್​ನಿಂದ ಮತ್ತೂರು ಕ್ರಾಸ್ ತನಕ ಸುಮಾರು 100 ಮೀಟರ್ ಸಾಗಿದ್ದಾನೆ. ನಂತರ ನಿಲ್ಲಿಸಿದ್ದಾನೆ.

ಚಾಲಕ ನೂರು ಮೀಟರ್​ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿದ್ದಾನೆ. ಸ್ವಲ್ಪದಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವ್ಯಕ್ತಿ ಕಾರಿನ ಬಾನೆಟ್‌ನ ಮೇಲೆ ಟ್ರಾಫಿಕ್ ಪೊಲೀಸ್‌ ಸಿಬ್ಬಂದಿಯನ್ನು 100 ಮೀಟರ್‌ಗೂ ಹೆಚ್ಚು ದೂರ ಒಯ್ದಿರುವ ಘಟನೆ ವೀಡಿಯೊದಲ್ಲಿ ರೆಕಾರ್ಡ್‌ ಆಗಿದೆ.
ಕಾರು ಚಾಲಕನ ವಿರುದ್ಧ ಪೂರ್ವ ಸಂಚಾರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಎಸ್​​ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ರಸ್ತೆಯ ತಪ್ಪು ಮಾರ್ಗದಲ್ಲಿ ವಾಹನ ಚಲಾಯಿಸಿದ್ದಕ್ಕಾಗಿ ಆಟೋ ಚಾಲಕನೊಬ್ಬನನ್ನು ಟ್ರಾಫಿಕ್ ಪೋಲೀಸ್‌ ತಡೆಯಲು ಯತ್ನಿಸಿದ ಟ್ರಾಫಿಕ್ ಪೋಲೀಸನ ಮೇಲೆ ಆಟೋ ಓಡಿಸಲು ಪ್ರಯತ್ನಿಸಿದ ಘಟನೆ ನಡೆದಿತ್ತು.

ಪ್ರಮುಖ ಸುದ್ದಿ :-   ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement