ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದಲ್ಲಿ ಶನಿವಾರ (ನ. 2) ಭಾರತೀಯ ಭದ್ರತಾ ಪಡೆ ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ (Encounters) ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಅನಂತನಾಗದಲ್ಲಿ ಇಬ್ಬರು ಮತ್ತು ಖನ್ಯಾರ್ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಕಾರ್ಯಾಚರಣೆ ಮುಂದುವರಿದಿದೆ.
ಖನ್ಯಾರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಓರ್ವ ಉಗ್ರ ಹತನಾಗಿದ್ದಾನೆ. ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ಇಬ್ಬರು ಉಗ್ರರು ಅಡಗಿರುವ ಸಾಧ್ಯತೆ ಇದೆ. ಅನಂನನಾಗದ ಹಲ್ಕಾನ್ ಗಲಿ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಪ್ರದೇಶದಲ್ಲಿ ಸೇನೆ ಶೋಧ ಕಾರ್ಯವನ್ನು ಚುರುಕುಗೊಳಿಸಿದೆ.
ಶುಕ್ರವಾರ ಉತ್ತರ ಪ್ರದೇಶ ಮೂಲದ ಇಬ್ಬರು ಕಾರ್ಮಿಕ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆ ನಡೆಸಲಾಯಿತು. ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮಗಮ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದರು. ಕಳೆದ 2 ವಾರಗಳ ಅಂತರದಲ್ಲಿ ಕಣಿವೆ ರಾಜ್ಯದಲ್ಲಿ ವಲಸೆ ಕಾರ್ಮಿಕರನ್ನು ಗುರುಯಾಗಿಸಿಕೊಂಡು ನಡೆದ 4ನೇ ದಾಳಿ ಇದಾಗಿದೆ. ಅ. 20ರಂದು ಗಂಡರ್ಬಾಲ್ ಜಿಲ್ಲೆಯ ಗಗಾಂಗೀರ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಓರ್ವ ವೈದ್ಯ ಸೇರಿ 7 ಮಂದಿ ಮೃತಪಟ್ಟಿದ್ದರು. ಇದರಲ್ಲಿ ಸುರಂಗ ಕಾಮಗಾರಿ ನಡೆಸುತ್ತಿದ್ದ ಇಬ್ಬರು ಬಿಹಾರ ಮೂಲದ ಕಾರ್ಮಿಕರೂ ಸೇರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ