ಬೆಳಗಾವಿ : ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿ ಮಹಿಳೆಯೊಬ್ಬರು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಗಂಡ ಹಾಗೂ ಅತ್ತೆ ಕಾಟದಿದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದು ಕಂಡುಬಂದಿದೆ.
ಮೃತರನ್ನು ಕಲಕಾಂಬ ಗ್ರಾಮದ ಕವಿತಾ ಬಸವಂತ ಜುನೆ  (40) ಮತ್ತು ಸಮರ್ಥ ಬಸವಂತ ಜುನೆ  (14) ಎಂದು ಗುರುತಿಸಲಾಗಿದೆ. ಮಹಿಳೆಯ ಮೂಲತಃ ಜಾಂಬೋಟಿ ರಸ್ತೆಯ ಕಿಣಯೇ ಗ್ರಾಮದವರು ಎನ್ನಲಾಗಿದೆ. ಮೂರು ದಿನಗಳ ಹಿಂದೆ ಕಲಕಾಂಬ ಗ್ರಾಮದಿಂದ ಇವರು ನಾಪತ್ತೆಯಾಗಿದ್ದರು.
ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತಾಯಿ, ಮಗ ಕೆರೆಯ ಬಳಿ ಚಪ್ಪಲಿ ತೆಗೆದು ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ದಿನಗಳ ಹಿಂದೆಯೆ ಇವರು ನೀರಿಗೆ ಜಿಗಿದಿರಬಹುದು. ಗಂಡ ಹಾಗೂ ಅತ್ತೆಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬರೆದಿಟ್ಟ ಡೆತ್ ನೋಟ್ ಸಿಕ್ಕಿದೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement