ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಣೆ ಮಾಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ವಿರುದ್ಧ ಪೊಲೀಸರು ಕ್ರಮ ಜರುಗಿಸಲು ಮುಂದಾಗಿದ್ದಾರೆ. ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದೇ ಇದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಬೀದಿಗಿಳಿದುಕರಾಳ ದಿನ ಆಚರಣೆ ಮಾಡಿದ್ದರು. ಈಗ ಈ ಸಂಬಂಧ 45ಕ್ಕೂ ಹೆಚ್ಚು ಎಂಇಎಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಜಿ ಶಾಸಕ ಮನೋಹರ ಕಿಣೇಕರ, ಮಾಜಿ ಮೇಯರ್ ಮಾಲೋಜಿ ಅಷ್ಟೇಕರ, ಪ್ರಕಾಶ ಮರಗಾಳೆ, ರಮಾಕಾಂತ ಕೊಂಡುಸ್ಕರ್, ರಂಜಿತ್ ಚವ್ಹಾಣ ಪಾಟೀಲ, ಅಮರ ಯಳೂರಕರ, ಗಜಾನನ ಪಾಟೀಲ, ನೇತಾಜಿ ಜಾಧವ, ಅಂಕುಶ ಕೇಸರಕರ, ವಿಕಾಸ ಕಲಘಟಗಿ, ಮದನ ಬಾಮನೆ, ಸಚಿನ ಕೇಳ್ವೇಕರ, ಪ್ರಶಾಂತ ಭಾಮನೆ, ಪ್ರಶಾಂತ್ , ಕಿರಣ್ ಗಾವಡೆ, ಮಹಾದೇವ ಪಾಟೀಲ, ಶುಭಂ ಶೆಲ್ಕೆ, ರೇಣು ಕಿಲ್ಲೇಕರ್, ಸರಸ್ವತಿ ಪಾಟೀಲ, ಸರಿತಾ ಪಾಟೀಲ, ಕಿರಣ ಹುದ್ದಾರ್, ದತ್ತಾ ಉಘಾಡೆ, ಶ್ರೀಕಾಂತ ಕದಂ, ಚಂದ್ರಕಾಂತ ಕೊಂಡುಸ್ಕರ, ಸಂತೋಷ ಕೃಷ್ಣಾಚೆ, ಗುಂಡು ಕದಂ, ಸುನೀಲ ಬಾಳೇಕುಂದ್ರಿ, ಗಣೇಶ ದಡ್ಡಿಕರ, ಪ್ರಕಾಶ ಶಿರೋಳ್ಕರ್, ಆರ್. ಎಂ. ಚೌಗುಲೆ, ಸುಧೀರ ಚವ್ಹಾಣ, ಮಲ್ಲಪ್ಪ ಪಾಟೀಲ, ನಾಗೇಶ ಪಾಟೀಲ, ಸೂರಜ್ ಯಳ್ಳೂರಕರ, ಶ್ರೀಕಾಂತ ಚವ್ಹಾಣ, ಸದಾ ಚವ್ಹಾಣ, ಕಿರಣ ಮೋದಗೇಕರ, ಶಿವಾಜಿ ಮಂಡೋಳಕರ ಸೇರಿದಂತೆ 1000 ರಿಂದ 1500 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸಮಿತಿ ತಿಳಿಸಿದೆ.
ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಗಡಿ ಒಡೆಯಲು ಪ್ರಯತ್ನಿಸುತ್ತಿದೆ, ಈ ಬಾರಿ ಮರಾಠಿ ಭಾಷಿಕ ಪತ್ರಕರ್ತರು ಮತ್ತು ವಕೀಲರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದೆ ಎಂದು ಸಮಿತಿ ಈಗ ಆರೋಪ ಮಾಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ