ವೀಡಿಯೊ…| ಬೆಂಗಳೂರು : ಬಸ್‌ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಸಾವು : ಬಸ್ಸಿನಲ್ಲಿದ್ದವರ ಪ್ರಾಣ ಉಳಿಸಿದ ಕಂಡಕ್ಟರ್…

ಬೆಂಗಳೂರು: ಬೆಂಗಳೂರು ಮಹಾನಗರದ ನೆಲಮಂಗಲದಿಂದ ದಾಸನಪುರಕ್ಕೆ ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗ 40 ವರ್ಷದ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸ್ ನೆಲಮಂಗಲದಿಂದ ದಾಸನಪುರಕ್ಕೆ ತೆರಳುತ್ತಿದ್ದಾಗ ಚಾಲನೆ ಮಾಡುತ್ತಿರುವಾಗಲೇ ಚಾಲಕ ಕಿರಣಕುಮಾರ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು

ಬಸ್‌ ಓಡಿಸುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಕುಸಿದು ಬಿದ್ದಿದ್ದಾರೆ. ಬಸ್‌ ಚಲಿಸುತ್ತಿರುವಾಗಲೇ ಚಾಲಕನಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಚಾಲಕ ಸೀಟಿನಲ್ಲಿಯೇ ಕುಸಿದುಬಿದ್ದರಿಂದ ಈ ವೇಳೆ ಬಸ್ ಅಡ್ಡಾದಿಡ್ಡಿ ಓಡಿ ಇನ್ನೊಂದು ಬಿಎಂಟಿಸಿ ಬಸ್‌ಗೆ ಸವರಿಕೊಂಡು ಮುಂದೆ ಸಾಗಿದೆ. ಕಂಡಕ್ಟರ್ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ. ಈ ವೇಳೆ ನಿರ್ವಾಹಕ ಸಮಯಪ್ರಜ್ಞೆ ತೋರಿ ಬಸ್ ಅಪಘಾತಕ್ಕೀಡಾಗುವುದನ್ನು ತಪ್ಪಿಸಿದ್ದಾರೆ.
ಚಾಲಕ ಕುಸಿದು ಬಿದ್ದಾಗ ಬಸ್ಸು ಮತ್ತೊಂದು ಬಸ್‌ ಗೆ ಡಿಕ್ಕಿ ಹೊಡೆದು ಅದನ್ನು ಹಿಂದಿಕ್ಕಿ ಮುಂದೆ ಹೋಗುತ್ತಿರುವದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.

ಚಾಲಕ ಕುಸಿದು ಬಿದ್ದಿದ್ದನ್ನು ಗಮನಿಸಿದ ನಿರ್ವಾಹಕ ಓಬಳೇಶ ಎಂಬವರು ತಕ್ಷಣವೇ ಮುಂದಕ್ಕೆ ಓಡಿ ಚಾಲಕನನ್ನು ಪಕ್ಕಕ್ಕೆ ಕೂರಿಸಿ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಬ್ರೇಕ್‌ ಹಾಕಿ ಬಸ್ ನಿಲ್ಲಿಸಿದ್ದಾರೆ. ಬಸ್ಸಿನಲ್ಲಿ ಸುಮಾರು 50ರಷ್ಟು ಪ್ರಯಾಣಿಕರುಇದ್ದು ಎನ್ನಲಾಗಿದೆ. ಕಂಡಕ್ಟರ್ ಸಮಯಪ್ರಜ್ಞೆಯಿಂದಾಗಿ ಯಾವುದೇ ಅವಘಡ ಸಂಭವಿಸಿಲ್ಲ. ಚಾಲಕ ಕುಸಿದು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
ನಂತರ ಓಬಳೇಶ ಅವರು ಅವರು ಚಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಪರೀಕ್ಷಿಸಿದ ನಂತರ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement