ಮುಡಾ ಹಗರಣ : ಸತತ ಎರಡು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.
ಲೋಕಾಯುಕ್ತ ಪೊಲೀಸರು ಸತತ 2 ತಾಸುಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದ್ದು, ಅವರಿಗೆ ಸುಮಾರು 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಕರ್ನಾಟಕದ ಮೊದಲ ಹಾಲಿ ಮುಖ್ಯಮಂತ್ರಿಯಾಗಿದ್ದಾರೆ.
ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ವಿಚಾರಣೆ ಇದೇ ಮೊದಲ ಬಾರಿಗೆ ತನಿಖಾ ಸಂಸ್ಥೆಗಳ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ಬಳಿಕ, ಮತ್ತೆ ವಿಚಾರಣೆಗೆ ಕರೆದರೆ ಬರಬೇಕು ಎಂದು ಅಧಿಕಾರಿಗಳು ಸಹಿ ಪಡೆದುಕೊಂಡರು.

ಲೋಕಾಯುಕ್ತ ಪೊಲೀಸರ ವಿಚಾರಣೆಗೆ ಹಾಜರಾಗುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸಲಹೆಗಾರ ಜೊತೆ ಸಭೆ ನಡಸಿದ್ದರು. ಸಲಹೆಗಾರು ನೀಡಿದ ಸಲಹೆಯಂತೆ ಸರ್ಕಾರಿ ಸವಲತ್ತು ಬಳಸದೇ, ಸರ್ಕಾರಿ ಕಾರನ್ನೂ ಬಳಸದೇ ತಮ್ಮ ಸಿಬ್ಬಂದಿಯನ್ನೂ ಜೊತೆಗೆ ಕರೆ ಖಾಸಗಿ ಕಾರಿನಲ್ಲಿ ವಿಚಾರಣೆಗೆ ಆಗಮಿಸಿದರು.
ವಿಚಾರಣೆ ವೇಳೆ ಸಿದ್ದರಾಮಯ್ಯ ತಾಳ್ಮೆ ಕಳೆದುಕೊಳ್ಳದೆ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಟ್ಟರು. ‘ನಾನು ಒಬ್ಬ ಸಾಮಾನ್ಯ ವ್ಯಕ್ತಿ ಎಂದುಕೊಂಡು ವಿಚಾರಣೆ ಮಾಡಿ ಎಂದು ಅವರು ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ತಾವು ನೀಡಿದ ಎಲ್ಲಾ ಉತ್ತರವನ್ನು ಲಿಖಿತ ರೂಪದಲ್ಲಿ ಇದ್ದದ್ದನ್ನು ಓದಿಕೊಂಡು ಕೊನೆಗೆ ಸಹಿ ಹಾಕಿದರು.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ…
ವಿಚಾರಣೆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಲೋಕಾಯುಕ್ತ ಪೊಲೀಸರ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ನನ್ನ ಹೇಳಿಕೆಗಳನ್ನು ದಾಖಲಿಸಲಾಗಿದೆ, ಮತ್ತು ಅವರು ನನ್ನ ಉತ್ತರಗಳನ್ನು ಓದಿದ್ದಾರೆ ಮತ್ತು ನಾನು ಅವುಗಳನ್ನು ಅನುಮೋದಿಸಿದ್ದೇನೆ, ”ಈ ಸಮಯದಲ್ಲಿ ಲೋಕಾಯುಕ್ತದಿಂದ ಮತ್ತೆ ಹಾಜರಾಗಲು ಸೂಚಿಸಿಲ್ಲ ಎಂದು ಅವರು ಹೇಳಿದರು.
”ಕಾನೂನು ಪ್ರಕಾರವೇ ನಿವೇಶನ ಹಂಚಿಕೆ ಪ್ರಕ್ರಿಯೆ ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ಸುಳ್ಳು ಆರೋಪ ಮಾಡಿದ್ದು, ಎಲ್ಲಾ ಆರೋಪಗಳಿಗೆ ನಾನು ಉತ್ತರಿಸಿದ್ದೇನೆ. ಆರೋಪಗಳ ನಂತರ ಅವರನ್ನು ನನ್ನ ಪತ್ನಿ ಸ್ವಯಂಪ್ರೇರಣೆಯಿಂದ ಸೈಟ್‌ಗಳನ್ನು ಹಿಂತಿರುಗಿಸಿದ್ದಾರೆ ಎಂದು ಅವರು ಹೇಳಿದರು.

ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಪರಿಹಾರವಾಗಿ ನೀಡಿರುವ 14 ಪರ್ಯಾಯ ನಿವೇಶನಗಳ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 27 ರಂದು ಸಿದ್ದರಾಮಯ್ಯ ಮತ್ತು ಪಾರ್ವತಿ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದರು. ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಮುಖ್ಯಮಂತ್ರಿಯನ್ನು ಪ್ರಾಥಮಿಕ ಆರೋಪಿ ಎಂದು ಹೆಸರಿಸಲಾಗಿದ್ದು, ಅವರ ಪತ್ನಿಯನ್ನು ಎರಡನೇ ಆರೋಪಿ ಎಂದು ಪಟ್ಟಿ ಮಾಡಲಾಗಿದೆ.
ಮೈಸೂರಿನ ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಸುವಂತೆ ಬೆಂಗಳೂರಿನ ನ್ಯಾಯಾಲಯ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದ ನಂತರ ಈ ತನಿಖೆ ನಡೆಯುತ್ತಿದೆ. ಪಾರ್ವತಿ ಅವರನ್ನು ಲೋಕಾಯುಕ್ತರು ಅಕ್ಟೋಬರ್ 25 ರಂದು ಪ್ರಶ್ನಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement