ಜಮೀರ್‌ ಅಹ್ಮದ್‌ ರನ್ನು ನಾನು ಯಾವತ್ತೂ ಕುಳ್ಳ ಎಂದು ಕರೆದಿಲ್ಲ ; ಕುಮಾರಸ್ವಾಮಿ

ಮೈಸೂರು : ಜಮೀರ್‌ ಅಹ್ಮದ್‌ ಅವರನ್ನು ನಾನು ಯಾವತ್ತೂ ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ರಾಜಕೀಯವಾಗಿ ಅಷ್ಟೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ. ಬಸವರಾಜ ಹೊರಟ್ಟಿ ಆವತ್ತು ನನ್ನನ್ನು ಕುಮಾರ ಎಂದಾಗ ಅವರನ್ನು ಹೊಡೆಯಲು ಹೋದವ ಈ ಜಮೀರ್‌. ಹೊರಟ್ಟಿ ಅವರನ್ನೇ ಕೇಳಿ ಬೇಕಾದರೆ. ಇದರ ಬಗ್ಗೆ ಬೇಕಾದರೆ ಕೇಳಬಹುದು ಎಂದು ಹೇಳಿದರು.

ನಾನು ಕರಿಯಾ, ಕುಳ್ಳ ಎಂದು ಹೇಳುವ, ಹೇಳಿಸಿಕೊಳ್ಳುವ ಸಂಸ್ಕೃತಿಯಿಂದ ಬಂದವನಲ್ಲ. ಅವರ ಮಾತುಗಳು ಅವರ ಸಂಸ್ಕೃತಿ ತೋರಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ ಈ ಮಾತುಗಳನ್ನ ಸಮರ್ಥಿಸಿಕೊಂಡಿದ್ದಾರೆ. ಇಂಥ ಮಾತು ಹೇಳಿದವರು ಮೇಲೆ ಪ್ರಕರಣ ದಾಖಲು ಮಾಡಿ ಜೈಲಿಗೆ ಹಾಕಿದ ಸಾಕಷ್ಟು ಪ್ರಕರಣಗಳಿವೆ. ಅವರು ದುಡ್ಡಿನ ಮದದಿಂದ ಈ ರೀತಿ ಮಾತಾಡುತ್ತಿದ್ದಾರೆ ಎಂದು ಜಮೀರ್‌ ಅಹ್ಮದ್‌ ವಿರುದ್ಧ ಕಿಡಿಕಾರಿದರು.
ಚನ್ನಪಟ್ಟಣದಲ್ಲಿ ನಿಖಿಲ್ ಅವರಿ​ಗೆ ಉತ್ತಮ ವಾತಾವರಣವಿದೆ. ಜನತೆಯ ಆಶೀರ್ವಾದ ಅವರ​ ಪರವಾಗಿದ್ದು, ಗೆಲ್ಲುವ ವಿಶ್ವಾಸವಿದೆ” ಎಂದು ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement