ಸಾವರ್ಕರ್ ಕುರಿತ ಮಾನಹಾನಿ ಹೇಳಿಕೆ ಪ್ರಕರಣ: : ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಸೂಚನೆ

ಪುಣೆ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಡಿಸೆಂಬರ್‌ 2ರಂದು ಖುದ್ದು ಹಾಜರಾಗುವಂತೆ ಪುಣೆ ನ್ಯಾಯಾಲಯ ಸೋಮವಾರ ಸಮನ್ಸ್‌ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಮೋಲ್ ಶಿಂಧೆ ಅವರು ಈ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯ ಅಕ್ಟೋಬರ್ 23ರಂದು ಹೊರಡಿಸಿದ್ದ ಸಮನ್ಸ್‌ ಸ್ವೀಕೃತವಾಗಿಲ್ಲ ಎಂದು ರಾಹುಲ್‌ ಪರ ವಕೀಲ ಮಿಲಿಂದ್ ಪವಾರ್ ಎಂದು ಗಾಂಧಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ದೂರುದಾರರ ಪರ ವಾದ ಮಂಡಿಸಿದ ವಕೀಲ ಸಂಗ್ರಾಮ್ ಕೊಲ್ಹಟ್ಕರ್, ರಾಹುಲ್‌ ಗಾಂಧಿಗೆ ಹಾಜರಾಗುವಂತೆ ಹೊಸದಾಗಿ ಸಮನ್ಸ್ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ರಾಹುಲ್‌ ಗಾಂಧಿ ವಕೀಲ ಮಿಲಿಂದ್ ಪವಾರ್ ಅವರು ಮುಂದಿನ ದಿನಾಂಕದಂದು ತಮ್ಮ ಕಕ್ಷಿದಾರರು ಹಾಜರಾಗುತ್ತಾರೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು. ನ್ಯಾಯಾಲಯ ಮತ್ತೊಂದು ಸಮನ್ಸ್‌ ಜಾರಿ ಮಾಡಿದೆ.
ಇದೇ ನ್ಯಾಯಾಲಯ ಅಕ್ಟೋಬರ್ 23ರಂದು ಹೊರಡಿಸಿದ್ದ ಸಮನ್ಸ್‌ ಸ್ವೀಕೃತವಾಗಿಲ್ಲ ಎಂದು ರಾಹುಲ್‌ ಪರ ವಕೀಲ ಮಿಲಿಂದ್ ಪವಾರ್ ಹೇಳಿದ ಹಿನ್ನೆಲೆಯಲ್ಲಿ ಸಾತ್ಯಕಿ ಪರ ವಕೀಲ ಸಂಗ್ರಾಮ್ ಕೊಲ್ಹಟ್ಕರ್ ಮತ್ತೊಮ್ಮೆ ಸಮನ್ಸ್‌ ನೀಡುವಂತೆ ನ್ಯಾಯಾಲಯವನ್ನು ಕೋರಿದರು.
ಮಾರ್ಚ್ 2023 ರಲ್ಲಿ ಲಂಡನ್‌ನಲ್ಲಿ ರಾಹುಲ್‌ ಗಾಂಧಿ ಮಾಡಿದ ಭಾಷಣ ಆಧರಿಸಿ ಸಾವರ್ಕರ್ ಅವರ ಮೊಮ್ಮಗ ದೂರು ನೀಡಿದ್ದರು. ವಿ ಡಿ ಸಾವರ್ಕರ್‌ ಮತ್ತವರ ಗುಂಪು ಮುಸ್ಲಿಮರನ್ನು ಥಳಿಸಿದ್ದಾಗಿಯೂ, ಆಗ ಅವರಿಗೆ ಸಂತೋಷವಾಗಿದ್ದಾಗಿಯೂ ಬರೆದುಕೊಂಡಿದ್ದಾರೆ ಎಂದು ರಾಹುಲ್‌ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಹೇಳಿಕೆಗಳನ್ನು ನಿರಾಕರಿಸಿರುವ ಸಾತ್ಯಕಿ ಅವರು ರಾಹುಲ್‌ ಅವರ ಹೇಳಿಕೆಗಳು ಮಾನಹಾನಿಕರ ಎಂದು ಹೇಳಿದ್ದಾರೆ.
ಐಪಿಸಿ ಸೆಕ್ಷನ್‌ 500ರ ಅಡಿಯಲ್ಲಿ ರಾಹುಲ್‌ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು. ಅಲ್ಲದೆ ಸಿಆರ್‌ಪಿಸಿ ಸೆಕ್ಷನ್ 357ರ ಅಡಿಯಲ್ಲಿ ತಮಗೆ ಗರಿಷ್ಠ ಮಾನನಷ್ಟ ಪರಿಹಾರ ದೊರಕಿಸಿಕೊಡಬೇಕು ಎಂದು ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement