ಅಂತ್ಯಕ್ರಿಯೆ ನಡೆಸುವಾಗ ಕಣ್ಣು ಬಿಟ್ಟ ಚಿತೆ ಮೇಲಿಟ್ಟ ಶವ …! ಮೂವರು ವೈದ್ಯರು ಅಮಾನತು..!!

ಜೈಪುರ : ಅಂತ್ಯಕ್ರಿಯೆ ನಡೆಸಲು ಚಿತೆ ಮೇಲೆ ಮಲಗಿಸಿದ್ದ 25 ವರ್ಷದ ಯುವಕನೊಬ್ಬ ಕಣ್ಣು ಬಿಟ್ಟ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.ಈ ಘಟನೆ ಸಂಬಂಧ ಆಸ್ಪತ್ರೆಯ ಪ್ರಧಾನ ವೈದ್ಯಾಧಿಕಾರಿ ಸೇರಿದಂತೆ ನಾಲ್ವರು ವೈದ್ಯರನ್ನು ಅಮಾನತುಗೊಳಿಸಲಾಗಿದೆ.
ಆತ ಎಚ್ಚರಗೊಂಡ ತಕ್ಷಣ ಆಂಬುಲೆನ್ಸ್ ಕರೆಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ವೈದ್ಯರು ಮೃತಪಟ್ಟಿರುವುದಾಗಿ ಹೇಳಿದ್ದ ಶ್ರವಣ ದೋಷ ಹೊಂದಿದ್ದ ಯುವಕನನ್ನು ರೋಹಿತಾಶಕುಮಾರ ಎಂದು ಗುರುತಿಸಲಾಗಿದೆ.
ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನನ್ನು ನಂತರ ಜೈಪುರಕ್ಕೆ ಕರೆದೊಯ್ಯಲಾಗುತಿತ್ತು. ಆದರೆ ಮಾರ್ಗಮಧ್ಯೆ ಆತ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರು. ವೈದ್ಯರ ನಿರ್ಲಕ್ಷ್ಯವನ್ನು ಪರಿಗಣಿಸಿದ ಜುಂಜುನು ಜಿಲ್ಲಾಧಿಕಾರಿ ರಾಮಾವತಾರ ಮೀನಾ, ಗುರುವಾರ ರಾತ್ರಿ ಡಾ. ಯೋಗೇಶ ಜಖಾರ್, ಡಾ. ನವನೀತ್ ಮೀಲ್ ಮತ್ತು ಪಿಎಂಒ ಡಾ.ಸಂದೀಪ ಪಚಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ವೈದ್ಯಕೀಯ ಇಲಾಖೆಯ ಕಾರ್ಯದರ್ಶಿಗೆ ತಿಳಿಸಲಾಗಿದೆ ಎಂದು ಮೀನಾ ತಿಳಿಸಿದ್ದಾರೆ.
ಆರೋಗ್ಯ ಹದಗೆಟ್ಟ ನಂತರ ಆಶ್ರಯ ಮನೆಯಲ್ಲಿ ಗುರುವಾರ ಪ್ರಜ್ಞಾಹೀನರಾಗಿ ಬಿದ್ದದ್ದ ರೋಹಿತೇಶಕುಮಾರ ಅವರನ್ನು ಜುಂಜುನುವಿನ ಬಿಡಿಕೆ (BDK) ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಆತ ಸ್ಪಂದಿಸದಿದ್ದಾಗ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಶವಗಾರದಲ್ಲಿ 2 ಗಂಟೆಗಳ ಕಾಲ ದೇಹವನ್ನು ಇಟ್ಟಿದ್ದರು…!
ಪಂಚನಾಮೆ ಮಾಡಿದ್ದ ಪೊಲೀಸರು ದೇಹವನ್ನು ಅಂತ್ಯಸಂಸ್ಕಾರ ಮಾಡಲು ಕರೆದೊಯ್ದಿದ್ದರು. ಚಟ್ಟದ ಮೇಲೆ ದೇಹವನ್ನು ಇಟ್ಟಿದ್ದಾಗ ರೋಹಿತೇಶಕುಮಾರ ಇದ್ದಕ್ಕಿದ್ದಂತೆ ಉಸಿರಾಡಲು ಶುರು ಮಾಡಿದ್ದಾರೆ. ಕೂಡಲೇ ಅಂಬುಲೆನ್ಸ್ ಕರೆಯಿಸಿದ್ದು, ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಕಂದಾಯ ಅಧಿಕಾರಿ ಮಹೇಂದ್ರ ಮುಂಡ್, ಸಾಮಾಜಿಕ ನ್ಯಾಯ ಇಲಾಖೆ ಉಪ ನಿರ್ದೇಶಕರಾದ ಪಾವನ್ ಪೂನಿಯಾ ಕೂಡಾ ಆಸ್ಪತ್ರೆಗೆ ತೆರಳಿ ಮಾಹಿತಿ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement