ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ “ಮುಹಮ್ಮದ್ ಯೂನಸ್ ಅಲ್ಪಸಂಖ್ಯಾತರ ನರಮೇಧದಲ್ಲಿ ಭಾಗಿ”: ಪದಚ್ಯುತಿ ನಂತರ ಶೇಖ್ ಹಸೀನಾ ಮೊದಲ ಭಾಷಣ

ನವದೆಹಲಿ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ.
ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವರ್ಚುವಲ್ ಮೂಲಕ ಮಾತನಾಡಿದ ಶೇಖ್ ಹಸೀನಾ ಅವರು ಮುಹಮ್ಮದ್ ಯೂನಸ್ “ಹತ್ಯಾಕಾಂಡ” ನಡೆಸುತ್ತಿದ್ದಾರೆ ಮತ್ತು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ತಮ್ಮ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರಂತೆಯೇ ತನ್ನನ್ನು ಮತ್ತು ತನ್ನ ಸಹೋದರಿ ಶೇಖ್ ರೆಹಾನಾ ಅವರನ್ನು ಹತ್ಯೆ ಮಾಡುವ ಯೋಜಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಮುಜಿಬುರ್ ರೆಹಮಾನ್ 1975 ರಲ್ಲಿ ಹತ್ಯೆಗೀಡಾದರು.
ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆಗಳ ನಂತರ ಆಗಸ್ಟ್‌ನಲ್ಲಿ ರಾಜೀನಾಮೆ ನೀಡಿ ಭಾರತದಲ್ಲಿ ಆಶ್ರಯ ಪಡೆದ ನಂತರ ಇದು ಅವರ ಮೊದಲ ಸಾರ್ವಜನಿಕ ಭಾಷಣವಾಗಿದೆ. “ಶಸ್ತ್ರಸಜ್ಜಿತ ಪ್ರತಿಭಟನಾಕಾರರನ್ನು ಗಣಭಬನ ಕಡೆಗೆ ನಿರ್ದೇಶಿಸಲಾಯಿತು. ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದರೆ, ಅನೇಕ ಜೀವಗಳು ಬಲಿಯಾಗುತ್ತವೆ. ಇದು 25-30 ನಿಮಿಷಗಳ ವಿಷಯವಾಗಿದೆ, ಮತ್ತು ನಾನು ಬಲವಂತವಾಗಿ ಹೊರಡುವಂತೆ ಮಾಡಲಾಯಿತು. ನಾನು ಅವರಿಗೆ [ಗಾರ್ಡ್‌ಗಳಿಗೆ] ಗುಂಡು ಹಾರಿಸಬೇಡಿ ಎಂದು ಹೇಳಿದೆ. ಎಂದು ಆಗಸ್ಟ್ 5 ರಂದು ಢಾಕಾದಲ್ಲಿನ ತನ್ನ ಅಧಿಕೃತ ನಿವಾಸದ ಮೇಲೆ ನಡೆದ ದಾಳಿಯನ್ನು ಉಲ್ಲೇಖಿಸಿ ಅವರು ಹೇಳಿದರು.

ಪ್ರಮುಖ ಸುದ್ದಿ :-   ಅಮೆರಿಕ ವಾಯು ನೆಲೆ ಮೇಲೆ ಇರಾನ್‌ ಕ್ಷಿಪಣಿ ದಾಳಿ ; ವಾಯ ಪ್ರದೇಶ ಮುಚ್ಚಿದ ಕತಾರ್, ಯುಎಇ, ಬಹ್ರೇನ್

“ಇಂದು, ನನ್ನ ಮೇಲೆ ನರಮೇಧದ ಆರೋಪವಿದೆ. ವಾಸ್ತವವಾಗಿ, ಮಹಮ್ಮದ್‌ ಯೂನಸ್ ಹತ್ಯಾಕಾಂಡದಲ್ಲಿ ನಿಖರವಾಗಿ ವಿನ್ಯಾಸಗೊಳಿಸಿದ ರೀತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಾಸ್ಟರ್‌ಮೈಂಡ್‌ಗಳಾದ ವಿದ್ಯಾರ್ಥಿ ಸಂಯೋಜಕರು ಮತ್ತು ಯೂನಸ್ – ಈ ನರಮೇಧದ ಹಿಂದೆ ಇದ್ದಾರೆ ಎಂದು ಅವರು ಅವರು ಕಾರ್ಯಕ್ರಮದಲ್ಲಿ ಹೇಳಿದರು. ಬಾಂಗ್ಲಾದೇಶದ ಪ್ರಸ್ತುತ ಆಡಳಿತವು ಅಲ್ಪಸಂಖ್ಯಾತರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಶೇಖ್ ಹಸೀನಾ ಹೇಳಿದರು.
“ಹಿಂದೂಗಳು, ಬೌದ್ಧರು, ಕ್ರಿಶ್ಚಿಯನ್ನರು — ಯಾರನ್ನೂ ಬಿಡಲಾಗಿಲ್ಲ. ಹನ್ನೊಂದು ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿದೆ, ದೇವಾಲಯಗಳು ಮತ್ತು ಬೌದ್ಧ ದೇವಾಲಯಗಳನ್ನು ಒಡೆಯಲಾಗಿದೆ. ಹಿಂದೂಗಳು ಪ್ರತಿಭಟಿಸಿದಾಗ, ಇಸ್ಕಾನ್ ನಾಯಕನನ್ನು ಬಂಧಿಸಲಾಯಿತು” ಎಂದು ಅವರು ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಬಂಧನಕ್ಕೆ ಪ್ರತಿಕ್ರಿಯೆಯಾಗಿ ಹೇಳಿದರು.

“ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಏಕೆ? ಅವರ ಮೇಲೆ ನಿರ್ದಯವಾಗಿ ದಾಳಿಯನ್ನು ಏಕೆ ನಡೆಸಲಾಗುತ್ತಿದೆ ಎಂದು ಪ್ರಶ್ನಿಸಿದರು. “ಜನರಿಗೆ ಇನ್ನು ಮುಂದೆ ನ್ಯಾಯ ಕೇಳುವ ಹಕ್ಕಿಲ್ಲ… ರಾಜೀನಾಮೆ ನೀಡಲು ನನಗೆ ಸಮಯವೂ ಸಿಗಲಿಲ್ಲ” ಎಂದು ಅವರು ಬಂಗಾಳಿ ಭಾಷೆಯಲ್ಲಿ ಹೇಳಿದರು. ಶೇಖ್ ಹಸೀನಾ ಅವರು ಹಿಂಸಾಚಾರವನ್ನು ತಡೆಯುವ ಉದ್ದೇಶದಿಂದ ಆಗಸ್ಟ್‌ನಲ್ಲಿ ಬಾಂಗ್ಲಾದೇಶವನ್ನು ತೊರೆದರು, ಆದರೆ ಅದು ಸಂಭವಿಸಲಿಲ್ಲ.
ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಂಬಂಧಗಳು ಹದಗೆಟ್ಟವು. ಆ ದೇಶದಲ್ಲಿ ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳ ಮೇಲಿನ ದಾಳಿಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.
ಶೇಖ್ ಹಸೀನಾ ಅವರು ಜುಲೈ ಮತ್ತು ಆಗಸ್ಟ್‌ನಲ್ಲಿ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆಗಳ ನಂತರ ಬಾಂಗ್ಲಾದೇಶವನ್ನು ತೊರೆದ ನಂತರ ಭಾರತದಲ್ಲಿಯೇ ಇದ್ದಾರೆ.
ಬಾಂಗ್ಲಾದೇಶದ ‘ವಿಜಯ ದಿವಸ’ ಆಚರಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವಾಮಿ ಲೀಗ್‌ನ ನಾಯಕಿ ತಮ್ಮ ಭಾಷಣದಲ್ಲಿ ತಮ್ಮ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಅಮೆರಿಕ ದಾಳಿಗೆ ಪ್ರತಿ ದಾಳಿ : ಕತಾರ್, ಇರಾಕಿನಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್‌

 

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement