ತುಮಕೂರು : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಬಿಗ್ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃಷಿ ಹೊಂಡದಲ್ಲಿ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದರು. ಅಲ್ಲದೆ ಇದನ್ನು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ನೀರಿಗೆ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ್ದರಿಂದ ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳಿಂದ ಆಕ್ಷೇಪಿಸಿದ್ದರು. ಸಾಮಾಜಿಕ ಮಾಧ್ಯಮ ವೀಕ್ಷಣೆಗಳಿಗಾಗಿ ಇಂತಹ ಕೃತ್ಯಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ತುಮಕೂರು ಜಿಲ್ಲೆಯ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ, ಪ್ರತಾಪ್ರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಿರ್ಜನ ಪ್ರದೇಶದಲ್ಲಿರುವ ರೈತರ ಕೃಷಿ ಹೊಂಡದಂತಹ ನೀರು ತುಂಬಿದ್ದ ಆಳವಾದ ಗುಂಡಿಗೆ ಸೋಡಿಯಂ ಮಾದರಿಯ ವಸ್ತುವನ್ನು ಹಾಕಿ, ನೀರಿನಾಳದಲ್ಲಿ ಸ್ಫೋಟ ಮಾಡಿದ್ದರು. ಈ ವೇಳೆ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿದ್ದು, ಬೆಂಕಿ ಕಾಣಿಸಿಕೊಂಡಿತ್ತು ಮತ್ತು ಜೋರಾಗಿ ಸದ್ದು ಬಂದಿತ್ತು. ಇದರ ವೀಡಿಯೋ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗ ತಮ್ಮ ಇನ್ಸ್ಟಾಗ್ರಾಮ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ. ಸದ್ಯ ಆ ವೀಡಿಯೊ ಆಧರಿಸಿ ಎಫ್ಐಆರ್ ದಾಖಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ