ಪಾರ್ಸೆಲ್‌ ಬಂದಿದೆ ಎಂದು ಮನೆಗೆ ನುಗ್ಗಿ ಮರ ಕತ್ತರಿಸುವ ಯಂತ್ರದಿಂದ ವೃದ್ಧನ ಬರ್ಬರ ಹತ್ಯೆ

ಮಂಡ್ಯ: ಮರ ಕತ್ತರಿಸುವ ಯಂತ್ರದಿಂದ ವೃದ್ಧನನ್ನು ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ತೋಟದ ಮನೆಗೆ ಒಂಟಿ ಮನೆಗೆ ಮರ ಕತ್ತರಿಸೋ ಯಂತ್ರದ ಜೊತೆ ನುಗ್ಗಿದ ದರೋಡೆಕೋರ ಈ ಘೋರ ಕೃತ್ಯ ಎಸಗಿದ್ದಾನೆ. ಸಾವಿಗೀಡಾದ ವೃದ್ಧನನ್ನು ರಮೇಶ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಯಶೋಧಮ್ಮ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಕೊಲೆ ಮಾಡಿರುವ ಆರೋಪಿಯನ್ನು ಮಹಮ್ಮದ್ ಇಬ್ರಾಹಿಂ ಎಂದು ಹೇಳಲಾಗಿದ್ದು, ಈತ ಆನ್‌ಲೈನ್‌ ಗೀಳು ಅಂಟಿಕೊಂಡ ನಂತರ ವಿಪರೀತ ಸಾಲ ಮಾಡಿದ್ದಾನೆ ಎನ್ನಲಾಗಿದೆ., ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಕ್ಯಾತನಹಳ್ಳಿ ಗ್ರಾಮದ ತೋಟದ ಮನೆಗೆ ದರೋಡೆ ಮಾಡಲು ಬಂದಿದ್ದ ಈತ ಮೊದಲಿಗೆ ರಮೇಶ ಅವರ ಪತ್ನಿ ಯಶೋದಮ್ಮರನ್ನು ಮಾತನಾಡಿಸಿದ್ದಾನೆ.

ನಿಮ್ಮ ಮನೆಗೆ ಮರ ಕತ್ತರಿಸುವ ಯಂತ್ರ ಬಂದಿದೆ. ನಿಮ್ಮ ಮನೆಯವರೇ ಆರ್ಡರ್ ಮಾಡಿದ್ದಾರೆ ತೆಗೆದುಕೊಳ್ಳಿ ಎಂದು ಹೇಳಿದ್ದಾನೆ. ಆಗ ನಾವು ಯಾವುದೇ ಯಂತ್ರ ಆರ್ಡರ್ ಮಾಡಿಲ್ಲ ಎಂದು ಅವರು ಉತ್ತರಸಿದ್ದಾರೆ. ಈ ವೇಳೆ ಅವರ ಕುತ್ತಿಗೆಗೆ ಯಂತ್ರ ಹಿಡಿದು ತಳ್ಳಿದ್ದಾನೆ. ಈ ವೇಳೆ ಯಶೋದಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆಮೇಲೆ ರಮೇಶ ಅವರನ್ನು ಮರ ಕತ್ತರಿಸುವ ಯಂತ್ರದಿಂದ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಈ‌ ವೇಳೆ ಪ್ರಜ್ಞೆ ತಪ್ಪಿದ್ದ ಯಶೋಧಮ್ಮ ಎಚ್ಚರಗೊಂಡು ಮನೆಯ ಬಾಗಿಲನ್ನು ಹೊರಗಡೆಯಿಂದ ಲಾಕ್ ಮಾಡಿ ಕೊಲೆ ಆರೋಪಿಯನ್ನು ಕೂಡಿ ಹಾಕಿ ಒಳಗೆ ಲಾಕ್‌ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ನಂತರ ಸ್ಥಳೀಯರನ್ನು ಕೂಗಿ ಕರೆದಿದ್ದಾರೆ. ಈ ವೇಳೆ ಮರ ಕತ್ತರಿಸುವ ಯಂತ್ರದ ಮೂಲಕ ಬಾಗಿಲನ್ನು ಕೊಯ್ಯಲು ಸಹ ಆತ ಯತ್ನಿಸಿದ್ದಾನೆ. ಆದರೆ ಸಾಧ್ಯವಾಗಿಲ್ಲ. ಈ ವೇಳೆ ಅಕ್ಕಪಕ್ಕದ ಜನರು ಸೇರಿ ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಲೆಗಾರನನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ತಿಳಿಸಿದ್ದಾರೆ. ಘಟನೆ ಕುರಿತಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
. ಕೊಲೆ ಆರೋಪಿ ಮೊಹಮ್ಮದ್ ಇಬ್ರಾಹಿಂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ನಿವಾಸಿ ಆಗಿದ್ದು, ಆನ್ ಲೈನ್ ಗೇಮ್ ನಿಂದ ವಿಪರೀತ ಸಾಲದ ಸುಳಿಗೆ ಸಿಲುಕಿದ್ದಾನೆ. ಮಾಡಿದ ತೀರಿಸಲು ದರೋಡೆಗೆ ಪ್ಲಾನ್ ಮಾಡಿದ್ದಾನೆ. ಆದರೆ, ದರೋಡೆ ಮಾಡುವಾಗ ಯಾರಾದರೂ ಅಡ್ಡಬಂದರೆ ಅವರನ್ನು ಕೊಲೆ ಮಾಡಲು ಮರ ಕತ್ತರಿಸುವ ಯಂತ್ರ ಒಯ್ದಿದ್ದಾನೆ ಎಂದು ಪೊಲೀಸ್‌ ವಿಚಾರಣೆ ವೇಳೆ ಬಾಯಬಿಟ್ಟಿದ್ದಾನೆ ಎನ್ನಲಾಗಿದೆ. ಯಶೋದಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement