ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees) 2024-2029ನೇ ಅವಧಿಯ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನಕ್ಕೆ ಶುಕ್ರವಾರ ಚುನಾವಾಣೆ ನಡೆದಿದ್ದು, ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ (CS Shadakshari) ಅವರು ಅವರು ಎರಡನೇ ಬಾರಿ ಹಾಗೂ ಖಜಾಂಚಿಯಾಗಿ ಶಿವರುದ್ರಯ್ಯ ವಿ.ವಿ ಆಯ್ಕೆಯಾಗಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯು ನಗರದ ಕಬ್ಬನ್‌ ಪಾರ್ಕ್‌ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಡಿ.27ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆ ವರೆಗೆ ನಡೆಯಿತು.
ಸಂಘದ 971 ಪ್ರತಿನಿಧಿಗಳು ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತ ಚಲಾವಣೆಗೆ ಹಕ್ಕು ಹೊಂದಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆಗೆ ಹಾಲಿ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಹಾಗೂ ಸಂಘದ ಮಾಜಿ ಅಧ್ಯಕ್ಷ ಬಿ.ಪಿ. ಮಂಜೇಗೌಡ ಅವರ ಸಹೋದರ ಬಿ.ಪಿ. ಕೃಷ್ಣೆಗೌಡ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಷಡಾಕ್ಷರಿ ಅವರು 507 ಮತಗಳನ್ನು ಪಡೆದರೆ ಬಿ.ಪಿ. ಕೃಷ್ಣೆಗೌಡ (442 ಮತ) ಮತಗಳನ್ನು ಪಡೆದರು.
ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರಜಾಸತ್ತಾತ್ಮಕ ವೇದಿಕೆಯ ಶಿವರುದ್ರಯ್ಯ ವಿ.ವಿ. ಅವರು 485 ಮತಗಳನ್ನು ಪಡೆದರೆ ನಾಗರಾಜ ಆರ್‌. ಜುಮ್ಮನ್ನನವರ (467) ಮತಗಳನ್ನು ಪಡೆದರು.

ಪ್ರಮುಖ ಸುದ್ದಿ :-   ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement