ಕಾರವಾರ | ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ ; 18 ಕಾರ್ಮಿಕರು ಅಸ್ವಸ್ಥ

ಕಾರವಾರ : ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ 18 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಉತ್ತರ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್​ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕಾರ್ಮಿಕರಿಗೆ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವರಿಗೆ ಕಂಪನಿಯ ಆವರಣದಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ನೀಲಕಂಠ, ಜಹನ್ನೂರು, ಕಮಲೇಶ ವರ್ಮಾ, ದೀಪು, ಸೃಜನ್, ನಂದಕಿಶೋರ, ನಜೀದುಲ್ಲಾ, ಬೇಜನಕುಮಾರ, ಕಿಶನ್ ಕುಮಾರ, ಅಜೀಜ್, ಮೋಹಿತ್ ವರ್ಮಾ ಸೇರಿದಂತೆಕರ್ನಾಟಕ, ಉತ್ತರಪ್ರದೇಶ ಮತ್ತು ಬಿಹಾರ ಮೂಲದ 18 ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಕ್ಲೋರಿನ್ ಸೋರಿಕೆಯಾಗಿ ಅದು ಒಳಗೆ ಆವರಿಸಿರುವ ಹಿನ್ನೆಲೆ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಡಿವೈಎಸ್​​ಪಿ ಗಿರೀಶ್ ಹಾಗೂ ಪೊಲೀಸರ ತಂಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದು, ಕಾರ್ಮಿಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಂಪನಿಯ ಬೇಜವಾಬ್ದಾರಿ‌ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ಮಾಡಲಾಗಿದೆ. ಕ್ಲೋರಿನ್ ಲೀಕ್ ಆದರೂ ಕಾರ್ಖಾನೆ ಆಡಳಿತ ಸೈರನ್ ಸಹ ಹಾಕದೇ ನಿರ್ಲಕ್ಷ್ಯ ಮಾಡಲಾಗಿದೆ. ಇದರಿಂದ ಕಾರ್ಮಿಕರಿಗೆ ಹಾಗೂ ಸ್ಥಳೀಯ ಜನರಿಗೆ ತೊಂದರೆಯಾಗುತ್ತಿದೆ ಎಂದು ಕಾರ್ಖಾನೆ ಎದುರು ಕಾರ್ಮಿಕರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ ಕಾರ್ಖಾನೆಯಲ್ಲಿರುವ ಎಲ್ಲಾ ಸಿಬ್ಬಂದಿಯನ್ನು ಹೊರ ಕಳುಹಿಸುವಂತೆ ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಶಿರಸಿ | ಮನೆಯ ಅಂಗಳಕ್ಕೇ ಬಂದ ಚಿರತೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement