ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸಚಿವೆಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಗಾಯಗಳಾಗಿವೆ. ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಬೆಳಗ್ಗೆ 6ರ ಸುಮಾರಿಗೆಈ ಘಟನೆ ನಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ. ಸಿಎಲ್ ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement