ಸೈಫ್ ಅಲಿ ಖಾನ್ ಪ್ರಕರಣ | ಈವರೆಗೆ ಯಾರನ್ನೂ ಬಂಧಿಸಿಲ್ಲ; ಪೊಲೀಸರ ಸ್ಪಷ್ಟನೆ

ಮುಂಬೈ: ಶುಕ್ರವಾರ ಮುಂಬೈನಲ್ಲಿ ಬಂಧನಕ್ಕೊಳಗಾದ ವ್ಯಕ್ತಿಯೊಬ್ಬ ಸೈಫ್ ಅಲಿ ಖಾನ್ ಅವರ ಬಾಂದ್ರಾ ಮನೆಯಲ್ಲಿ ನಡೆದ ದಾಳಿಗೆ ಸಂಬಂಧ ಹೊಂದಿದ್ದಾನೆ ಎಂದು ಮಧ್ಯಮಗಳಲ್ಲಿ ವರದಿಯಾದ ನಂತರ ಮುಂಬೈ ಪೊಲೀಸರು ಅದು ನಿಜವಲ್ಲ, ಈ ವ್ಯಕ್ತಿಗೂ ಸೈಫ್‌ ಅಲಿ ಖಾನ್‌ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಶುಕ್ರವಾರ ಮಧ್ಯಾಹ್ನ, ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ವಿಚಾರಣೆಗಾಗಿ ಬಾಂದ್ರಾ ಪೊಲೀಸ್ ಠಾಣೆಗೆ ಕರೆದೊಯ್ದ ವ್ಯಕ್ತಿಗೂ ಸೈಫ್ ಅಲಿ ಖಾನ್ ಮೇಲಿನ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಸೈಫ್‌ ಅಲಿ ಖಾನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಗುರುವಾರ ಮುಂಜಾನೆ ಸೈಫ್ ಅಲಿಖಾನ್ ಮೇಲೆ ಚಾಕುವಿನಿಂದ ದಾಳಿ ಮಾಡಿದ ವ್ಯಕ್ತಿ ಬಾಂದ್ರಾ ರೈಲು ನಿಲ್ದಾಣದ ಬಳಿ ಕಾಣಿಸಿಕೊಂಡಿದ್ದು, ಆತ ಬಟ್ಟೆ ಬದಲಿಸಿ, ನಿಲ್ದಾಣಕ್ಕೆ ಹೋಗಿ ರೈಲು ಹತ್ತಿದ್ದಾನೆ ಎಂದು ಪೊಲೀಸರು ನಂಬಿದ್ದಾರೆ. ಪಾಲ್ಘರ್ ಜಿಲ್ಲೆಯ ವಸೈ ಮತ್ತು ನಲಸೋಪಾರಾದಲ್ಲಿಯೂ ಪೊಲೀಸ್ ತಂಡಗಳು ಮೊಕ್ಕಾಂ ಹೂಡಿವೆ.
ನಟನ ನಾಲ್ಕು ಅಂತಸ್ತಿನ ನಿವಾಸವನ್ನು ಹೊಂದಿರುವ ಐಷಾರಾಮಿ ಬಾಂದ್ರಾ ಪ್ರದೇಶದ 12 ಅಂತಸ್ತಿನ ಕಟ್ಟಡ ‘ಸದ್ಗುರು ಶರಣ’ಗೆ ಕಳ್ಳತನ ಮಾಡಲು ವ್ಯಕ್ತಿ ಪ್ರವೇಶಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ...!

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement