ಶಿರಸಿ | ಜನವರಿ 21ರಂದು ‘ದಶರೂಪಕಗಳ ದಶಾವತಾರ’ ಯಕ್ಷಗಾನ ಸಂಶೋಧನಾ ಗ್ರಂಥ ಬಿಡುಗಡೆ

ಶಿರಸಿ : ಭರತನ ನಾಟ್ಯಶಾಸ್ತ್ರದ ಬೆಳಕಿನಲ್ಲಿ ಯಕ್ಷಗಾನದ ಪುನರ್ವ್ಯಾಖ್ಯಾನದ ಅವಶ್ಯಕತೆಯ ಹಿನ್ನೆಲೆಯಲ್ಲಿ ಹನ್ನೆರಡು ವರ್ಷಗಳಿಂದ ಅಧ್ಯಯನ ನಡೆಸಿದ ನಿವೃತ್ತ ಸಂಪಾದಕರು ಹಾಗೂ ಸಾಹಿತಿ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಎಂಬ ಸಂಶೋಧನಾ ಗ್ರಂಥದ ಲೋಕಾರ್ಪಣೆ ಸಮಾರಂಭ ಜನವರಿ 21ರ ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಧಾಮ(ನೆಮ್ಮದಿ ಆವರಣ)ದಲ್ಲಿ ನಡೆಯಲಿದೆ.
ಹೆಸರಾಂತ ವಿಮರ್ಶಕರು, ಮೀಮಾಂಸಕಾರರಾಗಿರುವ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಬೆಂಗಳೂರು ಸಂಶೋಧನಾ ಗ್ರಂಥದ ಬಿಡುಗಡೆಗೊಳಿಸಿ ಗ್ರಂಥದಲ್ಲಿನ ಸಾಹಿತ್ಯಾಂಶಗಳ ಮೇಲೆ ಮಾತನಾಡಲಿದ್ದಾರೆ. ಅಭ್ಯಾಗತರಾಗಿ ಆಗಮಿಸಲಿರುವ ವಿದ್ವಾನ್‌ ವಿ.ಉಮಾಕಾಂತ ಭಟ್ ಕೆರೆಕೈ ಕೃತಿಯಲ್ಲಿನ ಶಾಸ್ತ್ರೀಯ ನಿರ್ವಚನ ಮತ್ತು ಅನ್ವಿತಿಯ ಕುರಿತು ವಿಚಾರ ಮಂಡಿಸಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ.ಜಿ.ಎಲ್.ಹೆಗಡೆ ಗ್ರಂಥದಲ್ಲಿ ಪ್ರಸ್ತಾಪಿಸಿದ ಯಕ್ಷಗಾನದ ಶಾಸ್ತ್ರೀಯ ಪ್ರಯೋಗದ ಹಿನ್ನೆಲೆಯಲ್ಲಿ ಮಾತನಾಡಲಿದ್ದಾರೆ. ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಆರಂಭದಲ್ಲಿ ಗಣಪತಿ ಕಿರೀಟ ಪೂಜೆ ಮತ್ತು ತೆರೆ ಕುಣಿತದ ಮೂಲಕ ಗ್ರಂಥ ಪ್ರವೇಶ ಕಾರ್ಯಕ್ರಮ ನಡೆಯಲಿದೆ  ಗ್ರಂಥಕರ್ತ ಅಶೋಕ ಹಾಸ್ಯಗಾರರು ಸಂಶೋಧನೆಗೆ ಪ್ರೇರಣೆಯಾದ ಮತ್ತು ಎದುರಾದ ಸವಾಲುಗಳನ್ನು ಬಗ್ಗೆ ಮಾತನಾಡಲಿದ್ದಾರೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಲಾಗಿದೆ.

ಪ್ರಮುಖ ಸುದ್ದಿ :-   ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement