ರೈಲಿನಲ್ಲಿ ಬೆಂಕಿ ವದಂತಿ | ರೈಲಿನಿಂದ ಜಿಗಿದು ಪಕ್ಕದ ಹಳಿ ಮೇಲೆ ನಿಂತಿದ್ದವರ ಮೇಲೆ ಹರಿದ ಮತ್ತೊಂದು ರೈಲು; 11 ಮಂದಿ ಸಾವು

ಮುಂಬೈ : ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ರೈಲಿನಡಿ ಸಿಲುಕಿ ಹನ್ನೊಂದು ಜನರು ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ಜಲಗಾಂವ್​​ ಬಳಿ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ​ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿ ಹರಡಿದ ನಂತರ ಹೆದರಿದ ಪ್ರಯಾಣಿಕರು ಚಲಿಸುವ ರೈಲಿನಿಂದ ಜಿಗಿದು ಮತ್ತೊಂದು ರೈಲು ಹೇಳಿ ಮೇಲೆ ನಿಂತವರಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದು 11 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಮುಂಬೈನಿಂದ 400 ಕಿಮೀ ದೂರದಲ್ಲಿರುವ ಪಚೋರಾ ಬಳಿಯ ಮಹೇಜಿ ಮತ್ತು ಪರ್ಧಾಡೆ ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದೆ. ಸಂಜೆ 5 ಗಂಟೆ ಸುಮಾರಿಗೆ ಚಲಿಸುತ್ತಿದ್ದ ಪುಷ್ಪಕ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ನಂತರ ಚೈನ್ ಎಳೆದ ನಿಲ್ಲಿಸಲಾಯಿತು. ಭಯದಿಂದ ಪ್ರಯಾಣಿಕರು ಕೂಡಲೇ ರೈಲಿನಿಂದ ಹಾರಿ ಪಕ್ಕದ ಹಳಿ ಮೇಲೆ ನಿಂತಿದ್ದರು. ಇದೇ ವೇಳೆ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಮತ್ತೊಂದು ಎಕ್ಸ್ ಪ್ರೆಸ್ ರೈಲು ಜನರಿಗೆ ಡಿಕ್ಕಿ ಹೊಡೆದು ಹೋಗಿದೆ.

ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಕೆಳಗಿಳಿದು ಮತ್ತೊಂದು ಹಳಿಯ ಮೇಲೆ ನಿಂತಿದ್ದರು. ಆಗ ಬೆಂಗಳೂರಿನಿಂದ ದೆಹಲಿಗೆ ಹೋಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರ ಸ್ವಪ್ನಿಲ್ ನೀಲಾ ತಿಳಿಸಿದ್ದಾರೆ.
“ನಮ್ಮ ಪ್ರಾಥಮಿಕ ಮಾಹಿತಿಯೆಂದರೆ, ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೋಚ್‌ಗಳಲ್ಲಿ ಒಂದಾದ ‘ಹಾಟ್ ಆಕ್ಸಲ್’ ಅಥವಾ ‘ಬ್ರೇಕ್-ಬೈಂಡಿಂಗ್’ (ಜಾಮಿಂಗ್) ನಿಂದಾಗಿ ಕಿಡಿಗಳು ಕಂಡುಬಂದವು. ಇದರಿಂದ ಕೆಲವು ಪ್ರಯಾಣಿಕರು ಗಾಬರಿಗೊಂಡರು. ಅವರು ಸರಪಳಿಯನ್ನು ಎಳೆದರು ಮತ್ತು ಅವರಲ್ಲಿ ಕೆಲವರು ಕೆಳಗೆ ಹಾರಿದರು. ಅದೇ ಸಮಯದಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ಪಕ್ಕದ ಹಳಿಯಲ್ಲಿ ಹಾದು ಹೋಗುತ್ತಿತ್ತು ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

ಚಲಿಸುವ ರೈಲಿನಿಂದ ಜಿಗಿದಿದ್ದರಿಂದ ಹಲವರಿಗೆ ಗಾಯಗಳಾಗಿವೆ. ಗಾಯಾಳು ಪ್ರಯಾಣಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಯಿತು.
ಭುಸಾವಲ್‌ನಿಂದ ಅಪಘಾತ ಪರಿಹಾರ ರೈಲನ್ನು ಕಳುಹಿಸಲಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ವೈದ್ಯಕೀಯ ನೆರವು ನೀಡಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ತಿಳಿಸಿದೆ,
ಚಿತ್ರಗಳು ಹಳಿಗಳ ಮೇಲೆ ಬಿದ್ದಿರುವ ದೇಹಗಳನ್ನು ಮತ್ತು ಕೆಲವರು ಗಾಯಗೊಂಡು ಅಲೆದಾಡುತ್ತಿರುವುದನ್ನು ತೋರಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು ಎಲ್ಲ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement