ಪಿಸ್ತೂಲಿನಿಂದ ಆಕಸ್ಮಾತ್‌ ಹಾರಿದ ಗುಂಡು ; ಕಾಂಗ್ರೆಸ್‌ ಮುಖಂಡನಿಗೆ ಗಾಯ

ಮಂಗಳೂರು : ತನ್ನದೇ ಪಿಸ್ತೂಲಿಗೆ ಆಕಸ್ಮಿಕವಾಗಿ ಗುಂಡು ಹಾರಿ ಕಾಂಗ್ರೆಸ್ ಮುಖಂಡರೊಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ ಶೆಟ್ಟಿ ಎಂಬವರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಅವರು ಪರವಾನಗಿ ಇರುವ ಪಿಸ್ತೂಕು ಹೊಂದಿದ್ದು, ಮದುವೆಯೊಂದರ ಆಮಂತ್ರಣ ನೀಡಲು ಮಂಗಳವಾರ ಮಧ್ಯಾಹ್ನ ಅನಂತಾಡಿಯ ಸಂಬಂಧಿಕರ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ, ಹತ್ತಿರದಲ್ಲೇ ಇದ್ದ ಜಲ್ಲಿ ಕ್ವಾರಿಗೆ ಹೋಗಿ ಅವರಿಗಾಗಿ ಕಚೇರಿಯಲ್ಲಿ ಕಾಯುತ್ತಿದ್ದರು. ಈ ವೇಳೆ ತನ್ನ ಸೊಂಟದಲ್ಲಿದ್ದ ಪಿಸ್ತೂಲನ್ನು ತೆಗೆದು ಬಟ್ಟೆಯಿಂದ ಒರೆಸುತ್ತಿದ್ದಾಗ ಆಕಸ್ಮಿಕವಾಗಿ ಟ್ರಿಗರ್ ಅದುಮಲ್ಪಟ್ಟು, ಪಿಸ್ತೂಲಿನಿಂದ ಗುಂಡು ಸಿಡಿದು ಕಾಲಿಗೆ ಗಾಯವಾಗಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement