ಕಾಶ್ಮೀರ ; ಪಾಕಿಸ್ತಾನದ 7 ನುಸುಳುಕೋರರ ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಏಳು ಪಾಕಿಸ್ತಾನಿ ನುಸುಳುಕೋರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕೃಷ್ಣ ಘಾಟಿ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ನುಸುಳುಕೋರರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಅಲ್-ಬದ್ರ್ ಉಗ್ರಗಾಮಿಗಳು ಮತ್ತು ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಪಾಕಿಸ್ತಾನಿ ನುಸುಳುಕೋರರು ಕೊಲ್ಲಲ್ಪಟ್ಟರು. ಫೆಬ್ರವರಿ 4 ಮತ್ತು ಫೆಬ್ರವರಿ 5 ರಂದು ಭಾರತೀಯ ಪೋಸ್ಟ್‌ನಲ್ಲಿ ಬಾರ್ಡರ್ ಆಕ್ಷನ್ ಟೀಮ್ (BAT) ಕಾರ್ಯಾಚರಣೆ ನಡೆಸಿ ಏಳು ಮಂದಿಯನ್ನು ಹೊಡೆದುರುಳಿಸಿದೆ ಎಂದು ಹೇಳಲಾಗಿದೆ.
ಪಾಕಿಸ್ತಾನವು ತನ್ನ ಭಾರತ ವಿರೋಧಿ ಕಾರ್ಯಸೂಚಿ ಪ್ರಚಾರಗೊಳಿಸಲು ನಡೆಸುವ ‘ಕಾಶ್ಮೀರ ಒಗ್ಗಟ್ಟಿನ ದಿನ’ ಆಚರಣೆ ದಿನದ ಸಂದರ್ಭದಲ್ಲಿ ಇದು ಸಂಭವಿಸಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಈ ವಾರದ ಆರಂಭದಲ್ಲಿ, ಕಾಶ್ಮೀರ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಭಾರತದೊಂದಿಗೆ ಮಾತುಕತೆಯ ಮೂಲಕ ಪರಿಹರಿಸಲು ಬಯಸುವುದಾಗಿ ಹೇಳಿದ ನಂತರ ಈ ಬೆಳವಣಿಗೆಯಾಗಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಲಷ್ಕರ್-ಎ-ತೈಬಾ (ಎಲ್‌ಇಟಿ) ನಂತಹ ಭಯೋತ್ಪಾದಕ ಸಂಘಟನೆಗಳ ಕಮಾಂಡರ್‌ಗಳು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸಮಾವೇಶ ನಡೆಸಿದ್ದು, ಇದು ಪಾಕಿಸ್ತಾನದ ಬೂಟಾಟಿಕೆ ಬಹಿರಂಗವಾಗಲು ಕಾರಣವಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement