ಬೆಂಗಳೂರು : ಕದೆಹಲಿ ಚುನಾವಣೆ ಮುಗಿಯುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ.
ಭಾನುವಾರ ಸಂಜೆ ಬಿ. ವೈ. ವಿಜಯೇಂದ್ರ ದಿಢೀರ್ ಆಗಿ ದೆಹಲಿ ವಿಮಾನವೇರಿದ್ದಾರೆ. ದೆಹಲಿಗೆ ಬರುವಂತೆ ಹೈಕಮಾಂಡ್ನಿಂದ ಫೋನ್ ಕರೆ ಬಂದ ನಂತರ ದಾವಣಗೆರೆಗೆ ಹೋಗುತ್ತಿದ್ದ ಬಿ. ವೈ. ವಿಜಯೇಂದ್ರ ಅವರಿಗೆ ನೆಲಮಂಗಲದಿಂದ ಬೆಂಗಳೂರಿಗೆ ವಾಪಸ್ ಆದರು. ನಂತರ ಸಂಜೆ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಪೂರ್ವ ನಿಗದಿತ ಕಾರ್ಯಕ್ರಮದಂತೆ ಬಿ. ವೈ. ವಿಜಯೇಂದ್ರ ಭಾನುವಾರ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ನಡೆಯುತ್ತಿರುವ 7ನೇ ವರ್ಷದ ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಅವರು ದಾವಣಗೆರೆಗೆ ತೆರಳುತ್ತಿದ್ದರು. ಅವರು ನೆಲಮಂಗಲ ಸಮೀಪದಲ್ಲಿರುವಾಗ ತಕ್ಷಣ ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರ ಕರೆ ಬಂದಿದೆ ಎನ್ನಲಾಗಿದೆ. ಹೀಗಾಗಿ ವಿಜಯೇಂದ್ರ ಅವರು ಬೆಂಗಳೂರಿಗೆ ವಾಪಸ್ ಆಗಿ, ದೆಹಲಿಗೆ ಪ್ರಯಾಣಿಸಿದ್ದಾರೆ.
ಕಳೆದ ವಾರಭಿನ್ನ ಗುಂಪಿನ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಕುಮಾರ ಬಂಗಾರಪ್ಪ, ಜಿಎಂ ಸಿದ್ದೇಶ್ವರ ಮೊದಲಾದವರು ದೆಹಲಿಗೆ ಭೇಟಿ ನೀಡಿ ಕೆಲ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ವಿಜಯೇಂದ್ರ ವಿರುದ್ಧ ದೂರು ನೀಡಿದ್ದರು. ಹಾಗೂ ಫೆಬ್ರವರಿ 10ರಂದು ಒಳ್ಳೆಯ ಸುದ್ದಿ ತಿಳಿಯಲಿದೆ ಎಂದು ಹೇಳಿದ್ದರು. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶ್ರೀರಾಮುಲು ಅವರ ಹೆರು ಸಹ ಕೇಳಿಬಂದಿದೆ. ಈ ಮಧ್ಯೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಸಹ ದೆಹಲಿಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿತ್ತು. ಹೀಗಾಗಿ ಈಗ ಬಿ. ವೈ. ವಿಜಯೇಂದ್ರ ದೆಹಲಿ ಭೇಟಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ