1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನಕುಮಾರ ದೋಷಿ

ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಇಬ್ಬರು ಸಿಖ್ಖರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನಕುಮಾರ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ದೋಷಿ ಎಂದು ತೀರ್ಪು ನೀಡಿದೆ. ಫೆಬ್ರವರಿ 18 ರಂದು ಶಿಕ್ಷೆಯ ಪ್ರಮಾಣ ಕುರಿತು ವಾದಗಳು ನಡೆಯಲಿವೆ.
ಗಲಭೆಗೆ ಸಂಬಂಧಿಸಿದ ಮತ್ತೊಂದು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಸಜ್ಜನಕುಮಾರ, ನವೆಂಬರ್ 1, 1984 ರಂದು ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಜಸ್ವಂತ ಸಿಂಗ್ ಮತ್ತು ಅವರ ಮಗ ತರುಣದೀಪ ಸಿಂಗ್ ಅವರನ್ನು ಕೊಲ್ಲಲು ಜನಸಮೂಹದ ನೇತೃತ್ವ ವಹಿಸಿದ್ದರು ಮತ್ತು ಜನಸಮೂಹವನ್ನು ಪ್ರಚೋದಿಸಿದರು ಎಂದು ಆರೋಪಿಸಲಾಗಿತ್ತು.
ಆಪರೇಷನ್ ಬ್ಲೂಸ್ಟಾರ್ ನಂತರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ತಮ್ಮ ಇಬ್ಬರು ಸಿಖ್ ಅಂಗರಕ್ಷಕರಿಂದ ಹತ್ಯೆಯಾದ ನಂತರ ಗಲಭೆಗಳು ಭುಗಿಲೆದ್ದವು.

ಕಳೆದ ಡಿಸೆಂಬರ್‌ನಲ್ಲಿ ಪ್ರಕರಣದ ಅಂತಿಮ ವಾದವನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.
ಜಸ್ವಂತ ಸಿಂಗ್ ಮತ್ತು ಅವರ ಮಗನನ್ನು ಕೊಂದ ನಂತರ, ಜನಸಮೂಹವು ಅವರ ನಿವಾಸವನ್ನು ಸುಟ್ಟು ಹಾಕುವ ಮೊದಲು ಲೂಟಿ ಮಾಡಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಆದರೆ, ಈ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳುವ ಸಂದರ್ಭದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನಕುಮಾರ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.
ಸಜ್ಜನಕುಮಾರ ಕೇವಲ ಭಾಗವಹಿಸಿದ್ದಲ್ಲದೇ ಜನಸಮೂಹದ ನೇತೃತ್ವ ವಹಿಸಿದ್ದರು ಎಂದು ಸೂಚಿಸಲು “ಸಾಕಷ್ಟು ಅಂಶಗಳಿವೆ ಎಂದು ನ್ಯಾಯಾಲಯ ಹೇಳಿತ್ತು. ಈ ಹಿಂದೆ ಸಜ್ಜನಕುಮಾರ ಕುಮ್ಮಕ್ಕು, ಸಿಖ್ಖರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡುವುದು ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತಂದ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ.
2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ, 1984 ರ ಸಿಖ್ ವಿರೋಧಿ ದಂಗೆಯ ಪ್ರಕರಣಗಳನ್ನು ಮರು ತನಿಖೆ ಮಾಡಲು ಮೂರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಸ್ಥಾಪಿಸಿತು.

ಪ್ರಮುಖ ಸುದ್ದಿ :-   ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement